ಕಂಗನಾ ರಣಾವತ್ ಗನ್ ಮ್ಯಾನ್ ಮಂಡ್ಯದಲ್ಲಿ ಅರೆಸ್ಟ್

ಮಂಡ್ಯ: ಪ್ರೀತಿಸುವುದಾಗಿ ನಂಬಿಸಿ ಯುವತಿಯೊಬ್ಬಳಿಗೆ ಕೈ ಕೊಟ್ಟಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ಬಾಡಿಗಾರ್ಡ್ ಕುಮಾರ್ ಹೆಗ್ಗಡೆಯನ್ನು ಮುಂಬೈ ಪೊಲೀಸರು ಕರ್ನಾಟಕ ಪೊಲೀಸರ ಸಹಾಯದಿಂದ ಬಂಧಿಸಿದ್ದಾರೆ.

ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಮುಂಬೈ ಪೊಲೀಸರು ಕಿಕ್ಕೇರಿ ಪೊಲೀಸ್ ಠಾಣೆಯ ಪೊಲೀಸರ ಸಹಾಯದೊಂದಿದೆ ಕುಮಾರ್ ಹೆಗ್ಡೆಯನ್ನು ಬಂಧಿಸಿದ್ದಾರೆ. ಮೂಲತಃ ಕೆ.ಆರ್.ಪೇಟೆ ತಾಲೂಕಿ ಹೆಗ್ಗಡಹಳ್ಳಿ ಗ್ರಾಮದ ಕುಮಾರ್ ಹೆಗ್ಡೆ, ಹಲವು ವರ್ಷಗಳಿಂದ ಮುಂಬೈನಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಬಾಡಿಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ.

ಈ ವೇಳೆ ಮುಂಬೈನಲ್ಲಿ ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಲವ್ಬಿ ಡವ್ವಿ ನಡೆಸಿದ್ದ. ಇದಾದ ಬಳಿಕ ಆಕೆಗೆ ಕೈಕೊಟ್ಟು ಕಣ್ಮರೆಯಾಗಿದ್ದ. ಈ ವೇಳೆ ಸಂತ್ರಸ್ತ ಯುವತಿ ಮುಂಬೈನ ಅಂಧೇರಿ ಪೊಲೀಸ್ ಠಾಣೆಯಲ್ಲಿ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು ಮಾಡಿದ್ದಳು. ಇದಾದ ಬಳಿಕ ಮುಂಬೈನ ಮಾಧ್ಯಮಗಳಲ್ಲಿ ಸುದ್ದಿಯಾಗಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು.

ಈ ವೇಳೆ ಅಂಧೇರಿ ಪೊಲೀಸರು ಕುಮಾರ್ ಹೆಗ್ಡೆ ಬಂಧನಕ್ಕೆ ಬಲೆ ಬೀಸಿದ್ದರು. ಇಡೀ ಮುಂಬೈಯನ್ನು ಪೊಲೀಸರು ಹುಡುಕಿದರೂ ಕುಮಾರ್ ಹೆಗ್ಡೆ ಪತ್ತೆಯಾಗಿರಲಿಲ್ಲ. ಇದಾದ ಬಳಿಕ ಮುಂಬೈ ಪೊಲೀಸರು ಖಚಿತ ಮಾಹಿತಿ ಮೇರೆಗೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹೆಗ್ಗಡಹಳ್ಳಿ ಗ್ರಾಮಕ್ಕೆ ಬರುತ್ತಾರೆ. ಈ ವೇಳೆ ಕಿಕ್ಕೇರಿ ಪೊಲೀಸ್ ಠಾಣೆಯ ಪೊಲೀಸರ ಸಹಾಯದೊಂದಿಗೆ ಕುಮಾರ್ ಹೆಗ್ಡೆಯನ್ನು ಬಂಧನ ಮಾಡಿ ಕೆ.ಆರ್.ಪೇಟೆಯ ಜೆಎಂಎಫ್‍ಸಿ ಕೋರ್ಟ್‍ಗೆ ಹಾಜರುಪಡಿಸಿ ಕುಮಾರ್ ಹೆಗ್ಡೆಯನ್ನು ಮುಂಬೈ ಪೊಲೀಸರು ಕರೆದೊಯ್ದಿದ್ದಾರೆ.

Comments

Leave a Reply

Your email address will not be published. Required fields are marked *