ದ್ವಿತೀಯ ಪಿಯುಸಿ ಪಾಸ್‍ಗೆ ಹೊಸ ಮಾನದಂಡ ಪ್ರಕಟ – ಪಬ್ಲಿಕ್ ಟಿವಿ ಸಲಹೆ ಸ್ವೀಕರಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: ಕೊರೊನಾದಿಂದಾಗಿ ರಾಜ್ಯದಲ್ಲಿ ದ್ವೀತಿಯ ಪಿಯುಸಿ ಪರೀಕ್ಷೆ ರದ್ದುಗೊಂಡಿದೆ. ಪಬ್ಲಿಕ್ ಟಿವಿಯ ಸಲಗೆ ಸ್ವೀಕರಿಸಿರುವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಸರ್ಕಾರ ಹೊಸ ಮಾನದಂಡವನ್ನು ಪ್ರಕಟಿಸಿದೆ.

ನಿನ್ನೆ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ರಾಜ್ಯದಲ್ಲಿ ದ್ವೀತಿಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಗ್ರೇಡ್ ಆಧಾರದಲ್ಲಿ ಪಾಸ್ ಮಾಡಲು ಸರ್ಕಾರ ನಿರ್ಧಾರ ಮಾಡಿದೆ ಎಂದಿದ್ದರು. ಆದರೆ ಇಂದು ಎಲ್ಲಾ ವಿದ್ಯಾರ್ಥಿಗಳ ಪಾಸ್ ಮಾಡಲು ಮಾನದಂಡದಲ್ಲಿ ಕೆಲ ಬದಲಾವಣೆಯನ್ನು ತರಲು ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು

ಇದೇ ವಿಚಾರವಾಗಿ ಪಬ್ಲಿಕ್ ಟಿವಿಯ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್ ರವರು ನಡೆಸಿಕೊಡುವ ಬಿಗ್ ಬುಲೆಟಿನ್ ನಲ್ಲಿ ನಿನ್ನೆ ಪ್ರಥಮ ಪಿಯುಸಿ ಜೊತೆಗೆ ಎಸ್‌ಎಸ್‌ಎಲ್‌ಸಿ ಅಂಕಗಳನ್ನು ಪರಿಗಣಿಸಿ ಅಂತ ಸಲಹೆ ನೀಡಿದ್ರು. ಸಲಹೆಯನ್ನ ಸ್ವೀಕಾರ ಮಾಡಿರುವ ಶಿಕ್ಷಣ ಸಚಿವರು ಎಸ್‌ಎಸ್‌ಎಲ್‌ಸಿ ಅಂಕಗಳನ್ನು ಪರಿಗಣಿಸಿ ಗ್ರೇಡ್ ಮಾನದಂಡ ಸಿದ್ದ ಮಾಡಿ ಅಂತ ಶಿಕ್ಷಣ‌ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಶಿಕ್ಷಣ ಇಲಾಖೆ ‌ಪ್ರಧಾನ ಕಾರ್ಯದರ್ಶಿ, ಪಿಯುಸಿ ಬೋರ್ಡ್ ನಿರ್ದೇಕರು ಹಾಗೂ ಎಸ್ಎಸ್ಎಲ್ಸಿ ಬೋರ್ಡ್ ನಿರ್ದೇಶಕರಿಗೆ ಪತ್ರ ಬರೆದು ಮಾನದಂಡ ರೂಪಿಸಲು ಸೂಚನೆ ನೀಡಿದ್ದಾರೆ.

ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ಪ್ರಕಾರ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಲು ವಿದ್ಯಾರ್ಥಿಯ ಪ್ರಥಮ ಪಿಯುಸಿ ಪರೀಕ್ಷೆಯ ಅಂಕಗಳ ಜೊತೆಗೆ ಎಸ್‍ಎಸ್‍ಎಲ್‍ಸಿ ಅಂಕಗಳು ಸೇರಿ ಮಾನದಂಡ ಇಟ್ಟುಕೊಂಡು ಫಲಿತಾಂಶ ನೀಡಲು ಸರ್ಕಾರದ ತೀರ್ಮಾನಿಸಿದೆ.

ವಿದ್ಯಾರ್ಥಿಗಳ ಪ್ರಥಮ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳ ಎಷ್ಟು ಪ್ರಮಾಣದಲ್ಲಿ ಅಂಕ ಪರಿಗಣನೆ ಮಾಡಬೇಕು ಎಂದು ನಿರ್ಧಾರ ವಾಗಿಲ್ಲ. ಶೀಘ್ರವೇ ಈ ಕುರಿತು ಪಿಯುಸಿ ಬೋರ್ಡ್ ಸರಿಯಾದ ನಿರ್ಧಾರ ತೆಗೆದುಕೊಂಡು ಮಾರ್ಗಸೂಚಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ.

ಕಳೆದ ವರ್ಷ ತಜ್ಞರು ನೀಡಿದ ಸಲಹೆಯ ಆಧಾರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.  ಪಿಯುಸಿ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ. ಆದೆ ಕೊರೊನಾ ಕಾಲದಲ್ಲಿ ಪರೀಕ್ಷೆ ನಡೆಸುವುದು ಬಹಳ ಅಪಾಯಕಾರಿ. ಪರೀಕ್ಷೆ ನಡೆಸದೇ ಹೋದರೂ ಸರ್ಕಾರಕ್ಕೆ ಸಮಸ್ಯೆಯಾಗಲಿದೆ. ಒಟ್ಟಿನಲ್ಲಿ ಪರೀಕ್ಷೆ ಎಂಬ ಅಡಕತ್ತರಿಯಲ್ಲಿ ಶಿಕ್ಷಣ ಇಲಾಖೆ ಸಿಲುಕಿತ್ತು.

ಪರೀಕ್ಷೆ ಇಲ್ಲದೆ ಪಾಸ್ ಏನಾಗಬಹುದು?
ಶೈಕ್ಷಣಿಕ ಗುಣಮಟ್ಟಕ್ಕೆ ಭಾರೀ ಹೊಡೆತ ಬೀಳುವುದರ ಜೊತೆಗೆ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಹುದು. ನೀಟ್, ಸಿಇಟಿ ಸೀಟ್ ಹಂಚಿಕೆಯಲ್ಲಿ ಭಾರೀ ಗೊಂದಲವಾಗಲಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರೀಕ್ಷೆಯ ಬಳಿಕ ವಿದ್ಯಾರ್ಥಿಗಳು ಕೋರ್ಟ್ ಮೆಟ್ಟಿಲು ಏರಬಹುದು. ಅತ್ಯುತ್ತಮ ಕಾಲೇಜುಗಳಲ್ಲಿ ಪ್ರವೇಶಕ್ಕೆ ಸಿಕ್ಕಾಪಟ್ಟೆ ಬೇಡಿಕೆ ಸೃಷ್ಟಿಯಾಗಬಹುದು. ಕೆಲ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಗೆ ಒಳಗಾಗಬಹುದು. ಇದನ್ನೂ ಓದಿ: ಸುರೇಶ್ ಕುಮಾರ್ ಆತ್ಮವಂಚನೆ ಮಾಡಿಕೊಂಡು ಪಿಯುಸಿ ಪರೀಕ್ಷೆ ರದ್ದು ಮಾಡಿದ್ದಾರೆ – ಅಮರೇಗೌಡ

ಪರೀಕ್ಷೆ ನಡೆಸಿದ್ರೆ ಏನಾಗಬಹುದು?
ಶಿಕ್ಷಕರು, ವಿದ್ಯಾರ್ಥಿಗಳಿಗೆ ಕೋವಿಡ್ ಅಪಾಯವಾಗಿ ಸೋಂಕು ಸ್ಫೋಟ ಆಗಬಹುದು. ಕೋವಿಡ್ ಸಾವು ನೋವು ಹೆಚ್ಚಾಗಬಹುದು.

ತಜ್ಞರು ಏನು ಹೇಳಿದ್ರು?
ಕೊರೊನಾ ಸಮಯದಲ್ಲಿ ಪರೀಕ್ಷೆ ನಡೆಸುವುದು ಸೂಕ್ತ ಅಲ್ಲ. ಪರೀಕ್ಷೆಗೆ ಸರ್ಕಾರ ಆತುರ ಪಡಬಾರದು. ಪರೀಕ್ಷೆ ಮಾಡಲೇಬೇಕು ಅಂದರೆ ಸೋಂಕು ನಿಯಂತ್ರಣಗೊಂಡ ಬಳಿಕ ನಡೆಸಬಹುದು. ಶಾಲಾ-ಕಾಲೇಜುಗಳ ಹಂತದಲ್ಲಿಯೇ ಆಫ್‍ಲೈನ್ ಬದಲು ಆನ್‍ಲೈನ್ ಪರೀಕ್ಷೆ ನಡೆಸಬೇಕು.

ಪರೀಕ್ಷೆ ಬೇಡ ಎನ್ನುವವರ ವಾದ ಏನು?
ಕೊರೊನಾ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸಬಾರದು. ಮಕ್ಕಳ ಶಿಕ್ಷಣಕ್ಕಿಂತ ಮಕ್ಕಳ ಜೀವ ನಮಗೆ ಮುಖ್ಯ. ಈ ಕೊರೊನಾ ವರ್ಷದಲ್ಲಿ ಪರೀಕ್ಷೆಯೇ ಬೇಡ. ಸಿಬಿಎಸ್‍ಇ ಮಾದರಿಯಲ್ಲಿ ಎಲ್ಲರನ್ನು ಪಾಸ್ ಮಾಡಿ.

ಪರೀಕ್ಷೆ ಬೇಕು ಎನ್ನುವವರ ವಾದ ಏನಿತ್ತು?
ಸರ್ಕಾರ ಪರೀಕ್ಷೆ ರದ್ದು ಮಾಡಬಾರದು. ಸೆಕೆಂಡ್ ಪಿಯುಸಿ ಪರೀಕ್ಷೆ ಮುಖ್ಯ. ಸಾಮೂಹಿಕವಾಗಿ ಪಾಸ್ ನಿರ್ಧಾರ ಸರಿಯಲ್ಲ. ಒಂದು ವೇಳೆ ಎಲ್ಲರನ್ನೂ ಪಾಸ್ ಮಾಡಿದರೆ ಅಷ್ಟು ವಿದ್ಯಾರ್ಥಿಗಳಿಗೆ ಪಿಯು ಕಾಲೇಜುಗಳಲ್ಲಿ ಸೀಟ್ ಸಿಗಲಾರದು. ಬೇಡಿಕೆ ಜಾಸ್ತಿಯಾದರೆ ಕಾಲೇಜುಗಳೇ ಪರೀಕ್ಷೆ ನಡೆಸಿ ಪ್ರವೇಶ ನೀಡಬಹುದು. ಹೀಗಾಗಿ ಸೋಂಕು ನಿಯಂತ್ರಣಕ್ಕೆ ಬಂದ ಮೇಲೆ ಪರೀಕ್ಷೆ ನಡೆಸಬೇಕಾಗುತ್ತದೆ. ಇಲ್ಲ ಅಂದ್ರೆ ನೀಟ್, ಸಿಇಟಿ ವೇಳೆ ಮಕ್ಕಳಿಗೆ ತೊಂದರೆ ಆಗುತ್ತದೆ.

Comments

Leave a Reply

Your email address will not be published. Required fields are marked *