ಲಾಕ್‍ಡೌನ್ ಮೊದಲು ಮಾತನಾಡಿದ್ದೆ, ಈಗ ಆಘಾತಗೊಂಡಿದ್ದೇನೆ: ಸುದೀಪ್

ಬೆಂಗಳೂರು: ಬೈಕ್ ಅಪಘಾತದಿಂದ ಗಂಭೀರ ಗಾಯಗೊಂಡು ಸಾವು- ಬದುಕಿನ ನಡುವೆ ಹೋರಾಡುತ್ತಿದ್ದ ನಟ ಸಂಚಾರಿ ವಿಜಯ್ ಇದೀಗ ನಿಧನರಾಗಿದ್ದು, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಿಚ್ಚ, ಲಾಕ್‍ಡೌನ್‍ಗೂ ಮುಂಚೆ ಕೆಲ ಸಮಯ ಅವರೊಂದಿಗೆ ಕಳೆದಿದ್ದೇನೆ. ಇದೀಗ ಅವರು ಇಲ್ಲವಾಗಿದ್ದಾರೆ ಎಂಬ ಸುದ್ದಿ ನಿಜಕ್ಕೂ ಬೇಸರ ತಂದಿದೆ ಎಂದಿದ್ದಾರೆ. ಇದನ್ನೂ ಓದಿ: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ

ಟ್ವೀಟ್‍ನಲ್ಲೇನಿದೆ..?:
ಸಂಚಾರಿ ವಿಜಯ್ ಇನ್ನಿಲ್ಲ ಎಂಬ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಲಾಕ್ ಡೌನ್‍ಗೂ ಮುಂಚೆ ಅವರೊಂದಿಗೆ ಕೆಲ ಸಮಯ ಕಳೆದಿದ್ದೇನೆ. ಅವರ ಮುಂಬರುವ ಚಿತ್ರಕ್ಕಾಗಿ ಎಲ್ಲರೂ ಕಾಯುತ್ತಿದ್ದೆವು. ಆದರೆ ಇದೀಗ ಅವರು ನಿಧನರಾಗಿರುವ ಸುದ್ದಿ ಕೇಳಿ ಆಘಾತವಾಗಿದೆ. ಆ ದೇವರು ಅವರ ಕುಟುಂಬ ಹಾಗೂ ಗೆಳೆಯರಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲು ಎಂದು ಬರೆದುಕೊಂಡಿದ್ದಾರೆ.

ಆಸ್ಪತ್ರೆಗೆ ಸೇರಿಸಲು ಸಹಾಯ:
ಶನಿವಾರ ರಾತ್ರಿ ಜೆಪಿ ನಗರದ 7ನೇ ಹಂತದಲ್ಲಿ ಬೈಕ್ ಸ್ಕಿಡ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಅಪಘಾತದ ರಭಸಕ್ಕೆ ನಟ ಬೈಕಿನಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಈ ಮಾಹಿತಿ ತಿಳಿದ ತಕ್ಷಣ ಸುದೀಪ್ ಸಹಾಯ ಹಸ್ತ ಚಾಚಿದ್ದರು. ಸುದೀಪ್ ಅವರಿಂದಾಗಿ ರಾತ್ರೋರಾತ್ರಿ ವಿಜಯ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲು ಸಾಧ್ಯವಾಗಿತ್ತು ಎಂಬ ಮಾಹಿತಿ ಲಭ್ಯವಾಗಿತ್ತು. ಇದನ್ನೂ ಓದಿ: ನಿನ್ನೆ ನಾನು ಸುಳ್ಳು ಹೇಳಿದ್ದೆ – ವಿಜಯ್ ನೆನೆದು ಕಣ್ಣೀರಿಟ್ಟ ನಿನಾಸಂ ಸತೀಶ್

ವಿಜಯ್ ಆಸ್ಪತ್ರೆಗೆ ದಾಖಲಿಸಿದಾಗ ಅಪೋಲೋ ಆಸ್ಪತ್ರೆಯ ಮುಖ್ಯಸ್ಥರ ಜೊತೆ ಮಧ್ಯರಾತ್ರಿಯೇ ಮಾತನಾಡಿದ್ದ ಸುದೀಪ್, ವಿಜಯ್ ಅವರಿಗೆ ಚಿಕಿತ್ಸೆ ಮಾಡಲು ಮನವಿ ಮಾಡಿದ್ದರು. ಇತ್ತ ಆಸ್ಪತ್ರೆಯಲ್ಲಿದ್ದ ವಿಜಯ್ ಅವರ ಆರೋಗ್ಯದ ಬಗ್ಗೆ ಸುದೀಪ್ ಕ್ಷಣ ಕ್ಷಣವೂ ಮಾಹಿತಿ ಪಡೆಯುತ್ತಿದ್ದರು.

ವಿಜಯ್ ಮತ್ತು ಸುದೀಪ್ ನಡುವೆ ಕಳೆದ ಕೆಲವು ತಿಂಗಳುಗಳಿಂದ ಬಹಳ ಒಳ್ಳೆ ಗೆಳೆತನ ಶುರುವಾಗಿತ್ತು. ಮುಖ್ಯವಾಗಿ ಫಿಟ್ನೆಸ್ ವಿಚಾರವಾಗಿ ಇಬ್ಬರೂ ಬಹಳ ಚರ್ಚೆ ಮಾಡ್ತಿದ್ರಂತೆ. ಅಲ್ಲದೆ ಬ್ಯಾಡ್ಮಿಂಟನ್ ಕೂಡ ಪ್ರಾಕ್ಟೀಸ್ ಮಾಡ್ತಿದ್ರು.  ಇದನ್ನೂ ಓದಿ: ಅಂಗಾಂಗ ದಾನ ಮಾಡಲು ಮುಂದಾದ ಸಂಚಾರಿ ವಿಜಯ್ ಕುಟುಂಬಸ್ಥರು

Comments

Leave a Reply

Your email address will not be published. Required fields are marked *