ವಿಶ್ವನಾಥ್ ಬಗ್ಗೆ ಮಾತನಾಡಿದ್ರೆ ನನ್ನ ಬಾಯಿ ಹೊಲಸಾಗುತ್ತೆ: ರೇಣುಕಾಚಾರ್ಯ

ಬೆಂಗಳೂರು: ಸಿಎಂ ಯಡಿಯೂರಪ್ಪ ಹಾಗೂ ಅವ್ರ ಕುಟುಂಬ ವಿರುದ್ದ ಮಾತನಾಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಿರುದ್ದ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ:  ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ – ವಿಶ್ವನಾಥ್ ಆರೋಪ

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವನಾಥ್ ನಾಲಿಗೆ ಸಂಸ್ಕೃತಿ ಸರಿಯಿಲ್ಲ. ನಿನ್ನೆ ಸಿಎಂ ಯಡಿಯೂರಪ್ಪ ವಿರುದ್ಧ ಮಾತನಾಡಿದಾಗ ನಾವೆಲ್ಲಾ ಸ್ವಯಂ ಪ್ರೇರಣೆಯಿಂದ ವಿಶ್ವನಾಥ್ ವಿರುದ್ದ ಮಾತಾಡಿದ್ದೇವೆ. ಅವರಿಗೆ ಎಲೆಕ್ಷನ್‍ಗೆ ನಿಲ್ಲಬೇಡಿ ಅಂದ್ರೂ ಅವರು ನಿಂತರು. ಸೋತ ಮೇಲೆ ಸಿಎಂ ಯಡಿಯೂರಪ್ಪ ಅವರನ್ನ ಎಂಎಲ್‍ಸಿ ಮಾಡಿದರು. ಆದರೂ ಸಿಎಂ ವಿರುದ್ಧ, ಅವರ ಕುಟುಂಬದ ವಿರುದ್ಧ ಮಾತನಾಡಬಾರದು ಅಂತಾ ಹೇಳಿದ್ದೇವೆ. ರಾಜಕಾರಣದಲ್ಲಿ ಹಿರಿಯರು, ಆದರೆ ಅವರ ನಾಲಿಗೆ ಸಂಸ್ಕೃತಿ ಸರಿಯಿಲ್ಲ. ಎಚ್. ವಿಶ್ವನಾಥ್ ಆಡಿಯೋ ವೀಡಿಯೋ ಎಲ್ಲಾ ಇದೆ. ಅದನ್ನ ಕೇಳಿಸಿಕೊಂದರೆ ಸಾಕು ಅವರು ಎಂತಹವರು ಅಂತ ಗೊತ್ತಾಗುತ್ತದೆ. ಅವರ ಬಗ್ಗೆ ಮಾತನಾಡಿದ್ರೆ ನಮ್ಮ ಬಾಯಿ ಹೊಲಸಾಗುತ್ತೆದೆ ಎಂದು ಕಿಡಿಕಾರಿದ್ದಾರೆ.

ಎಲ್ಲೋ ಇದ್ದ ಸಿದ್ದರಾಮಯ್ಯ ಅವರನ್ನು ಕರೆದುಕೊಂಡು ಬಂದು ಅಧ್ಯಕ್ಷಗಿರಿ ಕೊಟ್ಟ ದೇವೇಗೌಡರು, ಕುಮಾರಸ್ವಾಮಿ ವಿರುದ್ಧವೇ ಮಾತನಾಡುತ್ತಾರೆ. ಈಗ ಯಡಿಯೂರಪ್ಪ, ಅವರ ಕುಟುಂಬದ ಬಗ್ಗೆ ಮಾತನಾಡ್ತಾರೆ ಅಂತ ಆಕ್ರೋಶ ಹೊರ ಹಾಕಿದ್ದಾರೆ.

ವಿಜಯೇಂದ್ರ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ವಿಶ್ವನಾಥ್ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ಯಾವುದೇ ಕಿಕ್ ಬ್ಯಾಕ್ ಪಡೆದಿಲ್ಲ. ಪಾರದರ್ಶಕವಾಗಿ ಟೆಂಡರ್ ಆಗಿದೆ. ಎಲ್ಲಾ ವಿವರವೂ ವೆಬ್‍ಸೈಟ್ ನಲ್ಲಿರುತ್ತೆ. ಅದನ್ನ ನೋಡಿದ್ರೆ ಎಲ್ಲರಿಗೂ ಗೊತ್ತಾಗುತ್ತದೆ. ಹತಾಶೆಯಿಂದ ವಿಶ್ವನಾಥ್ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು.

Comments

Leave a Reply

Your email address will not be published. Required fields are marked *