ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ 4 ಕಾಲು ಸೇತುವೆ ರಚನೆಗೆ ಕೇಂದ್ರದಿಂದ ಅನುದಾನ ಬಿಡುಗಡೆ: ಶೋಭಾ ಕರಂದ್ಲಾಜೆ

ಬೆಂಗಳೂರು : ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಲವಾರು ಭಾಗಗಳಲ್ಲಿ ಕ್ರಾಸಿಂಗ್ ಗಳನ್ನು ನಿರ್ಮಾಣ ಮಾಡುವ ಅಗತ್ಯತೆ ಇದ್ದು ಈ ಕುರಿತು ಕೇಂದ್ರ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ವಿನಂತಿ ಮಾಡಲಾಗಿತ್ತು.

ಕ್ಷೇತ್ರದ ಜನರ ಅಪೇಕ್ಷೆಯ ಮೇರೆಗೆ ಮಾಡಿದ ಮನವಿಯನ್ನು ಪುರಸ್ಕರಿಸಿ ಕೇಂದ್ರ ಭೂ ಸಾರಿಗೆ ಸಚಿವರು ಉಡುಪಿ ಜಿಲ್ಲೆಯ ನಾಲ್ಕು ಪ್ರದೇಶಗಳಲ್ಲಿ ಒಟ್ಟು ರೂ. 4.36 ಕೋಟಿಗಳ ವೆಚ್ಚದಲ್ಲಿ ಪಾದಚಾರಿ ಕಾಲುಸೇತುವೆಗಳನ್ನು ನಿರ್ಮಿಸಲು ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿರುತ್ತಾರೆ. ಈ ಕೆಳಗಿನ ಪ್ರದೇಶಗಳಲ್ಲಿ ಸ್ಟೀಲ್ ಕಾಲುಸೇತುವೆ ನಿರ್ಮಾಣವಾಗಲಿದೆ.

1. ಬಡಾ ಎರ್ಮಾಳ್, ಕಾಪು ವಿಧಾನಸಭಾ ಕ್ಷೇತ್ರ (ರೂ. 1.08 ಕೋಟಿಗಳು)
2. ಆನೆಗುಡ್ಡೆ, ಕುಂದಾಪುರ ವಿಧಾನಸಭಾ ಕ್ಷೇತ್ರ (ರೂ. 1.08 ಕೋಟಿಗಳು)
3. ಮಹೇಶ್ ಆಸ್ಪತ್ರೆಯ ಬಳಿ, ಉಡುಪಿ ವಿಧಾನಸಭಾ ಕ್ಷೇತ್ರ (ರೂ. 1.08 ಕೋಟಿಗಳು)
4. ಅಂಬಾಗಿಲು, ಉಡುಪಿ ವಿಧಾನಸಭಾ ಕ್ಷೇತ್ರ (ರೂ. 1.08 ಕೋಟಿಗಳು)

ಜನ ಸಂಚಾರ ಹೆಚ್ಚಿರುವ ಈ ಮೇಲಿನ ಪ್ರದೇಶಗಳಲ್ಲಿ, ರಸ್ತೆಯನ್ನು ದಾಟಲು ಜನಸಾಮಾನ್ಯರಿಗೆ ಸಹಾಯಕವಾಗುವಂತೆ ಸ್ಟೀಲ್ ಪಾದಚಾರಿ ಕಾಲುಸೇತುವೆಗಳನ್ನು ನಿರ್ಮಾಣ ಮಾಡಲು ಕೇಂದ್ರ ಸರಕಾರ ಅನುದಾನ ಬಿಡುಗಡೆ ಮಾಡಿರುತ್ತದೆ. ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯು ಪೂರ್ಣಗೊಂಡಿದ್ದು ಶೀಘ್ರದಲ್ಲಿಯೇ ಕೆಲಸ ಕಾರ್ಯಗಳು ಆರಂಭಗೊಳ್ಳಲಿದೆ.

ಜನರ ಅಗತ್ಯತೆಗಳನ್ನು ಮನಗಂಡು ಅನುದಾನ ಬಿಡುಗಡೆಗೊಳಿಸಿ ಕಾಮಗಾರಿಗಳಿಗೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಅವರು ಧನ್ಯವಾದ ಸಲ್ಲಿಸಿದ್ದಾರೆ.

Comments

Leave a Reply

Your email address will not be published. Required fields are marked *