ಮೂರನೇ ಅಲೆಯಲ್ಲಿ ಯಾರು ಇರ್ತಾರೋ ಯಾರು ಹೋಗ್ತಾರೋ ಗೊತ್ತಿಲ್ಲ: ಜಯಚಂದ್ರ

ತುಮಕೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ 2 ವರ್ಷ ಬಾಕಿ ಇದೆ. ಅಷ್ಟರಲ್ಲಿ ಕೊರೊನಾ ಮೂರನೇ ಅಲೆ ಬಂದು ಯಾರು ಇರುತ್ತಾರೋ ಯಾರು ಹೋಗುತ್ತಾರೋ ಗೊತ್ತಿಲ್ಲ. ಈ ನಡುವೆ ಕಾಂಗ್ರೆಸ್ ನಲ್ಲಿ ಸಿಎಂ ಗಾದಿ ಚರ್ಚೆ ಸದ್ಯಕ್ಕೆ ಅಪ್ರಸ್ತುತ ಎಂದು ಮಾಜಿ ಸಚಿವ ಟಿ.ಬಿ ಜಯಚಂದ್ರ ಹೇಳಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮಲ್ಲಿ ಈಗ ಸಿಎಂ ಯಾರು ಎಂಬ ಪ್ರಶ್ನೆ ಅಪ್ರಸ್ತುತ. 2023ರಲ್ಲಿ 125ಕ್ಕೂ ಹೆಚ್ಚು ಸ್ಥಾನ ಪಡೆದರೆ ಆಗ ಅಂದು ಆಯ್ಕೆಯಾದ ಶಾಸಕರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತಾರೆ. ಅಷ್ಟರಲ್ಲಿ ಸಿಎಂ ಅಭ್ಯರ್ಥಿ ಯಾರೂ ಅನ್ನುವ ಚರ್ಚೆ ಬೇಡ ಎಂದಿದ್ದಾರೆ.

ಜತೆಗೆ ಕಾಂಗ್ರೆಸ್ ನಲ್ಲಿ ಯಾವ ಬಣನೂ ಇಲ್ಲ, ಗುಂಪುಗಾರಿಕೆನೂ ಇಲ್ಲ, ಅದು ಕೇವಲ ಮಾಧ್ಯಮದ ಸೃಷ್ಟಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ನಾನು ಓಪನ್ ಹಾರ್ಟೆಡ್ ಏನೇ ಹೇಳಿದ್ರೂ ಓಪನ್ ಆಗಿ ಹೇಳ್ತೀನಿ: ಜಮೀರ್

Comments

Leave a Reply

Your email address will not be published. Required fields are marked *