ವಿದ್ಯಾರ್ಥಿನಿ ಮೊಬೈಲ್‍ಗೆ ಗ್ರಾ.ಪಂ. ಸದಸ್ಯನಿಂದ ಅಶ್ಲೀಲ ಮೆಸೇಜ್

ಚಿಕ್ಕಬಳ್ಳಾಪುರ: ಅಪ್ರಾಪ್ತ ವಿದ್ಯಾರ್ಥಿನಿಗೆ ಗ್ರಾಮ ಪಂಚಾಯ್ತಿ ಸದಸ್ಯನೋರ್ವ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದು, ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರ ಅಪ್ರಾಪ್ತ ಬಾಲಕಿ ಆನ್‍ಲೈನ್ ಶಿಕ್ಷಣ ಪಡೆಯುವ ಸಲುವಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಳು. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಾಗ ನನ್ನ ಮೊಬೈಲ್ ನಂಬರ್ ಪಡೆದಿರೋ ಗ್ರಾಮ ಪಂಚಾಯ್ತಿ ಸದಸ್ಯ ಶ್ರೀನಿವಾಸ್ ಎಂಬಾತ ಅಶ್ಲೀಲ ಮೆಸೇಜ್ ಫೋಟೋಸ್ ಕಳುಹಿಸಿದ್ದಾನೆ.

ಈತನ ಜೊತೆಗೆ ಈತನ ಸ್ನೇಹಿತ ಕೇಶವ್ ಸಹ ಕರೆ ಮಾಡಿ, ಶ್ರೀನಿವಾಸ್ ಗೆ ನೀನು ಇಷ್ಟ ಅಂತ ಹೇಳಿ 1,000 ರೂಪಾಯಿ ಕೊಡ್ತಾನೆ ಬಾ ಅಂತ ಒತ್ತಾಯ ಮಾಡಿದ್ನಂತೆ. ಕರೆ ಮಾಡಿ ಅಶ್ಲೀಲವಾಗಿ ಮಾತನಾಡೋದು ಪ್ರಶ್ನೆ ಮಾಡಿದಾಗ ಕುಡಿದು ಹಲ್ಲೆ ಮಾಡಲು ಸಹ ಮುಂದಾಗಿದ್ದಾನೆ ಅಂತ ದೂರಿನಲ್ಲಿ ಬಾಲಕಿ ಉಲ್ಲೇಖಿಸಿದ್ದಾಳೆ. ಇದನ್ನೂ ಓದಿ: ಈ ಕೇಸಿಗೆ ಮಂಗಳ ಹಾಡಿದ್ದೇವೆ, ಇದನ್ನು ಬಿಟ್ಟುಬಿಡಿ – ದರ್ಶನ್

ಈ ಸಂಬಂಧ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಆರೋಪಿಗಳಾದ ಶ್ರೀನಿವಾಸ್ ಹಾಗೂ ಕೇಶವ್ ಇಬ್ಬರು ಸಹ ತಲೆಮರೆಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಗುಡಿಬಂಡೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

Comments

Leave a Reply

Your email address will not be published. Required fields are marked *