ಗೃಹ ಸಚಿವರಿಗೆ ಶ್ರೀರಾಮಾಯಣ ದರ್ಶನಂ ಪುಸ್ತಕ ನೀಡಿ ಗೌರವ ಸಲ್ಲಿಸಿದ ಪೊಲೀಸರು

ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ‘ಶ್ರೀರಾಮಾಯಣ ದರ್ಶನಂ’ ಪುಸ್ತಕ ನೀಡಿ ಪೊಲೀಸರು ಗೌರವ ಸಲ್ಲಿಸಿದ್ದಾರೆ.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಐಕ್ಯತೆ ಮತ್ತು ದೈಹಿಕ ಸದೃಢತೆಗಾಗಿ ಸ್ವಾತಂತ್ರ್ಯ ಓಟ ಕಾರ್ಯಕ್ರಮದಲ್ಲಿ ಶ್ರೀರಾಮಾಯಣ ದರ್ಶನಂ ಪುಸ್ತಕ ನೀಡಿ ಅರಗ ಜ್ಞಾನೇಂದ್ರ ಅವರಿಗೆ ಗೌರವಿಸಲಾಯಿತು.

ಅರಗ ಜ್ಞಾನೇಂದ್ರ ಗೃಹ ಸಚಿವರಾಗಿ ಅಧಿಕಾರಿ ವಹಿಸಿಕೊಂಡ ಬಳಿಕ ಕೆಎಸ್‍ಆರ್ ಪಿ  ವತಿಯಿಂದ ಆಯೋಜನೆ ಮಾಡಿದ ಮೊದಲ ಕಾರ್ಯಕ್ರಮವಾಗಿದ್ದರಿಂದ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದರು.  ಇದನ್ನೂ ಓದಿ: ಶಾಲೆಗಳಲ್ಲಿ ದೈಹಿಕ ಶಿಕ್ಷಣ, ಶಿಕ್ಷಕರ ನೇಮಕ ಮಾಡಿ, ಕನಿಷ್ಠ ಒಂದು ಗಂಟೆ ಕ್ರೀಡೆಗೆ ಮೀಸಲಿಡಿ: ನಾರಾಯಣಗೌಡ

ಸರ್ಕಾರ ಕಾರ್ಯಕ್ರಮದಲ್ಲಿ ಹೂಗುಚ್ಛಗಳನ್ನು ಅತಿಥಿಗಳಿಗೆ ನೀಡದೇ ಪುಸ್ತಕವನ್ನು ಕನ್ನಡ ಪುಸ್ತಕವನ್ನು ನೀಡಬೇಕೆಂದು ಸರ್ಕಾರ ಆದೇಶ ಪ್ರಕಟಿಸಿದ ಹಿನ್ನೆಲೆಯಲ್ಲಿ ಎಲ್ಲ ಅತಿಥಿಗಳಿಗೆ ಪುಸ್ತಕ ನೀಡಿ ಗೌರವಿಸಲಾಯಿತು.

Comments

Leave a Reply

Your email address will not be published. Required fields are marked *