ಗಾಂಜಾ ಮಾರಾಟ – ಇಬ್ಬರು ಯುವಕರ ಬಂಧನ

ಚಿಕ್ಕೋಡಿ(ಬೆಳಗಾವಿ): ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರು ಸ್ಥಳೀಯ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ನಿಪ್ಪಾಣಿ ಪಟ್ಟಣದ ಬಾದಲ್ ಪ್ಲಾಟ್‍ನ ಸೋಹೆಲ್ ಶಬ್ಬೀರ ದೇಸಾಯಿ(26) ಹಾಗೂ ಶಿವಾಜಿನಗರ ಹಮೀದ ಸಲಮಾನ ಶೇಖ(21) ಬಂಧಿತ ಯುವಕರು. ಬಂಧಿತರಿಂದ ಸುಮಾರು 15 ಸಾವಿರ ಮೌಲ್ಯದ ಒಂದು ಕೆ.ಜಿ ಗೂ ಅಧಿಕ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಮುಸ್ಲಿಮರಲ್ಲಿ ಸಂತಾನೋತ್ಪತ್ತಿ ದರ ಕಡಿಮೆಯಾಗಿದೆ: ದಿಗ್ವಿಜಯ ಸಿಂಗ್

ಇನ್ನೊಬ್ಬ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸಿದ್ದಾರೆ. ನ್ಯಾಯಾಂಗ ಬಂಧನಕ್ಕಾಗಿ ಇಬ್ಬರನ್ನೂ ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಇದನ್ನೂ ಓದಿ: ಕಾಂಗ್ರೆಸ್ಸಿಗೆ ಹೆಚ್‍ಡಿಕೆ ಟಕ್ಕರ್ – ಸಿ.ಎಂ ಇಬ್ರಾಹಿಂ ಜೆಡಿಎಸ್ ಸೇರೋದು ಪಕ್ಕಾ!

ಗಾಂಜಾ ಮಾರಟದ ಖಚಿತ ಮಾಹಿತಿ ಆಧಾರದ ಮೇಲೆ ವೃತ್ತ ನಿರೀಕ್ಷಕ ಸಂಗಮೇಶ ಶಿವಯೋಗಿ, ಪಿಎಸ್‍ಐ ಕೃಷ್ಣವೇಣಿ ಗುರ್ಲಹೊಸೂರ ನೇತೃತ್ವದಲ್ಲಿ ಶೇಖರ ಅಸೋದೆ, ಉದಯ ಕಾಂಬಳೆ, ಮೊದಲಾದ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದ್ದಾರೆ. ದಾಳಿ ಕುರಿತು ನಿಪ್ಪಾಣಿ ಶಹರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Comments

Leave a Reply

Your email address will not be published. Required fields are marked *