ಕುಪ್ಪೂರು ಶ್ರೀ ಲಿಂಗೈಕ್ಯ

ನೆಲಮಂಗಲ: ಕುಪ್ಪೂರು ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಉಸಿರಾಟ ಸಮಸ್ಯೆಯಿಂದ ಹೃದಯಾಘಾತವಾಗಿ ನಿಧನರಾಗಿದ್ದಾರೆ.

ಯತೀಶ್ವರ ಶಿವಾಚಾರ್ಯ ಸ್ವಾಮೀಜಿ (55) ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿತ್ತು. ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಸ್ವಾಮೀಜಿ ಇಂದು ಕೊನೆಯುಸಿರೆಳದಿದ್ದಾರೆ. ಇದನ್ನೂ ಓದಿ:  ಭೀಕರ ರಸ್ತೆ ಅಪಘಾತ – ಚಾಲಕ ಸೇರಿ 6 ಮಂದಿ ವಿದ್ಯಾರ್ಥಿಗಳು ದುರ್ಮರಣ

ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗುತ್ತಿತ್ತು. ನೆಲಮಂಗಲದ ಬಳಿ ಅಂಬುಲೆನ್ಸ್‌ನಲ್ಲಿ ಹೋಗುತ್ತಿದ್ದ ವೇಳೆ ಉಸಿರಾಟ ಸಮಸ್ಯೆಯಿಂದ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಕುಪ್ಪೂರು ಮಠ ಸ್ವಾಮೀಜಿ ಲಿಂಗೈಕ್ಯರಾಗಿರುವುದನ್ನು ಮಠದ ಮೂಲ ಖಚಿತಪಡಿಸಿದೆ.

Comments

Leave a Reply

Your email address will not be published. Required fields are marked *