ಪೆಟ್ರೋಲ್ ಹಾಕಿ ಸುಟ್ಟು ಮಹಿಳೆಯ ಕೊಲೆ – ಸಿಬಿಐ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಯಾದಗಿರಿ: ಅತ್ಯಾಚಾರಕ್ಕೆ ನಿರಾಕರಿಸಿದ ಮಹಿಳೆಯನ್ನು ಪೆಟ್ರೋಲ್ ಹಾಕಿ ಸುಟ್ಟು ಕೊಲೆ ಮಾಡಿರುವ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಆಗ್ರಹಿಸಿ ಸಂಬಂಧಿಕರು ಪ್ರತಿಭಟಿಸಿದ್ದಾರೆ.

ಪ್ರಕರಣ ಸಂಬಂಧ ಈಗಾಗಲೇ ಪ್ರಮುಖ ಆರೋಪಿ ಬಂಧನವಾಗಿದ್ದರೂ ಇನ್ನುಳಿದ ಆರೋಪಿಗಳನ್ನು ಈ ಕೂಡಲೇ ಬಂಧನ ಮಾಡಬೇಕು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿ, ಮೃತ ಮಹಿಳೆ ಶವವಿಟ್ಟು ಸುರಪುರದಲ್ಲಿ ದಲಿತರ ಸಂಘಟನೆಗಳು ಮತ್ತು ಕುಟುಂಬಸ್ಥರು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ:  ಅತ್ಯಾಚಾರಕ್ಕೆ ನಿರಾಕರಿಸಿದ ಗೃಹಿಣಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ

ಸುರಪುರ ನಗರದ ಗಾಂಧಿ ವೃತ್ತದಲ್ಲಿ ಈ ಪ್ರತಿಭಟನೆ ನಡೆಸಲಾಗುತ್ತಿದೆ. ಮೊನ್ನೆ ರಾತ್ರಿ ಸುರಪುರ ತಾಲೂಕಿನ ಚೌಡೇಶ್ವರಹಾಳ ಗ್ರಾಮದಲ್ಲಿ ಮಹಿಳೆ ಮೇಲೆ ಅದೇ ಗ್ರಾಮದ ಗಂಗಪ್ಪ ಅತ್ಯಾಚಾರಕ್ಕೆ ಯತ್ನಿಸಿದ್ದನು. ಇದಕ್ಕೆ ಮಹಿಳೆ ಪ್ರತಿರೋಧ ವ್ಯಕ್ತಿಪಡಿಸಿದ್ದು, ಇದರಿಂದಾಗಿ ಗಂಗಪ್ಪ ಆಕೆಯ ಮೇಲೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಪರಾರಿಯಾಗಿದ್ದನು. ಇತ್ತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಕಲಬುರಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಗಂಗಪ್ಪನನ್ನು ಸುರಪುರ ಪೊಲೀಸರು ಬಂಧನ ಮಾಡಿದ್ದಾರೆ. ಆದರೆ ಇದು ಕುಟುಂಬಸ್ಥರಿಗೆ ಸಮಾಧಾನ ನೀಡಿಲ್ಲ. ಹೀಗಾಗಿ ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಬಂಧನ ಮಾಡಬೇಕು, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಪ್ರತಿಭಟನೆ ನಡೆಸಲಾಗುತ್ತಿದೆ. ಇದನ್ನೂ ಓದಿ:  ಅಪೌಷ್ಟಿಕತೆ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

Comments

Leave a Reply

Your email address will not be published. Required fields are marked *