ಮಧ್ಯರಾತ್ರಿ ಮಂಡ್ಯದಲ್ಲಿ ಪುಂಡರ ಅಟ್ಟಹಾಸ – ಶಾಸಕ ಸಿ.ಎಸ್.ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾಟ

– ಕಾರುಗಳ ಗಾಜು ಪುಡಿ ಪುಡಿ

ಮಂಡ್ಯ: ಶಾಸಕ ಸಿ.ಎಸ್.ಪುಟ್ಟರಾಜು ಮನೆ ಸೇರಿದಂತೆ ಹಲವು ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ.

ಪಾಂಡವಪುರ ಪಟ್ಟಣದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಮೇಲುಕೋಟೆ ಕ್ಷೇತ್ರದ ಶಾಸಕ ಸಿ.ಎಸ್ ಪುಟ್ಟರಾಜು ಮನೆ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದು ವಿಕೃತಿ ಮೆರೆದಿದ್ದಾರೆ.

ಕಿಡಿಗೇಡಿಗಳ ಕಲ್ಲು ತೂರಾಟದಿಂದ ಶಾಸಕರ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಅಲ್ಲದೆ ಪುಂಡರು ಮೂರು ಕಾರು, ಒಂದು ಖಾಸಗಿ ಬಸ್ ಹಾಗೂ ಹೋಂಡಾ ಶೋರೂಂ ಮೇಲು ಕಲ್ಲು ಎಸೆದಿದ್ದಾರೆ. ಇದನ್ನೂ ಓದಿ: ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪತಿ ಮೇಲೆ ಅನುಮಾನ

ಮೂರು ಕಾರುಗಳ ಗಾಜುಗಳಿಗೆ ಡ್ಯಾಮೇಜ್ ಆಗಿದೆ. ಒಂದು ಕಾರಿಗೆ ಭಾರೀ ಗಾತ್ರದ ಕಲ್ಲು ಎಸೆದಿದ್ದಾರೆ. ಕಿಡಿಗೇಡಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧ ಪಾಂಡವಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *