ತನ್ನ ವಿರುದ್ಧ ಟೀಕೆ ಮಾಡುತ್ತಿರೋರಿಗೆ ಸ್ಟ್ರಾಂಗ್ ಉತ್ತರ ಕೊಟ್ಟ ಸಮಂತಾ

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ತನ್ನ ವಿರುದ್ಧ ಟೀಕೆ ಮಾಡುತ್ತಿರುವವ ವಿರುದ್ಧ ಸ್ಟ್ರಾಂಗ್ ಆಗಿ ಉತ್ತರ ಕೊಟ್ಟಿದ್ದಾರೆ.

ಸಮಂತಾ ಮತ್ತು ನಾಗಚೈತನ್ಯ ಇತ್ತೀಚೆಗೆ ತಮ್ಮ ವಿಚ್ಛೇದನದ ವಿಚಾರವನ್ನು ಸಾರ್ವಜನಿಕವಾಗಿ ಎಲ್ಲರಿಗೂ ತಿಳಿಸಿದ್ದರು. ಈ ಹಿನ್ನೆಲೆ ಇವರ ಸಂಸಾರದ ಒಡೆಯಲು ಸಮಂತಾನೇ ಕಾರಣ ಎಂಬ ಮಾತು ಕೇಳಿಬರುತ್ತಿತ್ತು. ಈ ಪರಿಣಾಮ ಬೇಸರಗೊಂಡ ಸಮಂತಾ ಇನ್‍ಸ್ಟಾ ಸ್ಟೋರಿಯಲ್ಲಿ, ಮಹಿಳೆಯರು ಮಾತ್ರ ನಿರಂತರವಾಗಿ ನೈತಿಕವಾಗಿ ಪ್ರಶ್ನಾರ್ಹವಾಗಿದ್ದರೆ, ಅದೇ ಪುರುಷ ಮಾಡಿದಾಗ ನೈತಿಕವಾಗಿ ಅವರನ್ನು ಪ್ರಶ್ನಿಸುವುದಿಲ್ಲ. ಹಾಗಿದ್ದರೆ ನಾವು ಸಮಾಜದಲ್ಲಿ ಮೂಲಭೂತ ನೈತಿಕತೆಯನ್ನು ಹೊಂದಿಲ್ಲ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.  ಇದನ್ನೂ ಓದಿ: ದಾಂಪತ್ಯಕ್ಕೆ ಅಂತ್ಯ ಹಾಡಿದ ಸಮಂತಾ, ನಾಗ ಚೈತನ್ಯ

ಅ.2 ರಂದು ಸಮಂತಾ ತಮ್ಮ ದಾಂಪತ್ಯದ ಬಗ್ಗೆ, ಹೆಚ್ಚು ಆಲೋಚನೆಯ ನಂತರ ಚಾಯ್ ಮತ್ತು ನಾನು ನಮ್ಮ ಸ್ವಂತ ದಾರಿಗಳನ್ನು ಅನುಸರಿಸಲಿದ್ದೇವೆ. ಗಂಡ ಮತ್ತು ಹೆಂಡತಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ಒಂದು ದಶಕದ ಸ್ನೇಹವನ್ನು ಹೊಂದಲು ನಾವು ಅದೃಷ್ಟಶಾಲಿಯಾಗಿದ್ದೇವೆ. ನಮ್ಮ ಸಂಬಂಧ ಯಾವಾಗಲೂ ನಮ್ಮ ನಡುವೆ ವಿಶೇಷ ಬಾಂಧವ್ಯವನ್ನು ಹೊಂದಿರುತ್ತದೆ ಎಂದು ನಾವು ನಂಬುತ್ತೇವೆ ಎಂದು ಬರೆದು ಪೋಸ್ಟ್ ಮಾಡಿದ್ದರು.

ಅಕ್ಕಿನೇನಿ ಕುಟುಂಬ ಸಮಂತಾಗೆ ಜೀವನಾಂಶವಾಗಿ 200 ಕೋಟಿ ರೂ.ವನ್ನು ನೀಡಲು ಮುಂದಾಗಿತ್ತು. ಆದರೆ ಸಮಂತಾ ನನಗೆ ಜೀವನಾಂಶ ಬೇಡ ಹಾಗೂ ನಾಗ ಚೈತನ್ಯ ಅಥವಾ ಅವರ ಕುಟುಂಬದವರಿಂದ ಒಂದು ಪೈಸೆ ಕೂಡ ತೆಗೆದುಕೊಳ್ಳಲು ಬಯಸುವುದಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: 200 ಕೋಟಿ ಜೀವನಾಂಶ ರಿಜೆಕ್ಟ್ ಮಾಡಿದ ಸಮಂತಾ

ಈ ಹಿನ್ನೆಲೆ ಹಲವು ನಟ- ನಟಿಯರು ಬೇಸರವನ್ನು ವ್ಯಕ್ತಪಡಿಸಿದ್ದರು. ಇನ್ನೂ ಕೆಲವರು ಇದಕ್ಕೆ ಸಮಂತಾ ಅವರ ಬಾಲಿವುಡ್ ಎಂಟ್ರಿಯೇ ಕಾರಣ ಎಂದು ಹೇಳಿದ್ದರು.

Comments

Leave a Reply

Your email address will not be published. Required fields are marked *