ಪತ್ನಿ, ಅಣ್ಣನ ಮಗನಿಗೆ ಶೂಟ್ ಮಾಡಿ ಪತಿ ಆತ್ಮಹತ್ಯೆಗೆ ಶರಣು

ಮಡಿಕೇರಿ: ಆಸ್ತಿ ಬಗ್ಗೆ ವೈಷಮ್ಯದ ಹಿನ್ನೆಲೆಯಲ್ಲಿ ಸಂಬಂಧಿಕರ ಮಧ್ಯೆ ನಡೆದ ಜಗಳದಲ್ಲಿ ಗುಂಡು ಹಾರಿಸಿ ಪತ್ನಿ ಮತ್ತು ಅಣ್ಣನ ಮಗನನ್ನು ಕೊಂದು ತಾನು ಕೆರೆಗೆ ಬಿದ್ದು ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕಿರಗೂರು ಗ್ರಾಮದಲ್ಲಿ ನಡೆದಿದೆ.

ಸೋಮಯ್ಯ ಸಾಗರ್ ಎಂಬುವವರು ತನ್ನ ಪತ್ನಿ ಯಶೋಧ ಮತ್ತು ಅಣ್ಣನ ಮಗ ಮಧುಗೆ ಶೂಟ್ ಮಾಡಿದ್ದಾರೆ. ಪರಿಣಾಮ ಸ್ಥಳದಲ್ಲೇ ಮಧು(43) ಮೃತಪಟ್ಟಿದ್ದಾರೆ. ಗುಂಡು ಹಾರಿಸಲು ಮುಂದಾದಾಗ ತಡೆಯಲು ಬಂದ ಯಶೋಧ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಯಶೋಧ ಅವರ ಸ್ಥಿತಿ ಚಿಂತಾಜನಕವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯಶೋಧರನ್ನು ಮೈಸೂರಿಗೆ ರವಾನೆ ಮಾಡಲಾಗಿದೆ. ಇಬ್ಬರಿಗೂ ಗುಂಡು ಹೊಡೆದು ಸಾಗರ್ ಮನೆಯ ಸಮೀಪ ಇರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ ಕೃತಕ ಆನೆ ಬಳಸಿ ದಸರಾ ಮೆರವಣಿಗೆ

ಅಡಿಕೆ ತೋಟದ ಆಸ್ತಿಯಲ್ಲಿ ಪಾಲುಗಾರಿಕೆ ಬಗ್ಗೆ ಪದೇ ಪದೇ ಸೋಮಯ್ಯ ಹಾಗೂ ಮಧು ಅವರೊಂದಿಗೆ ಜಗಳವಾಗುತ್ತಿತ್ತು ಎನ್ನಲಾಗಿದೆ. ಇಂದು ಕೊಂಡ ಅಸ್ತಿ ವಿಷಯವಾಗಿ ಇಬ್ಬರ ನಡುವೆ ಜಗಳ ಆರಂಭಗೊಂಡಿದೆ ಮಾತಿಗೆ ಮಾತು ಬೆಳೆದು ಸಾಗರ್, ಮನೆಯಲ್ಲಿ ಇದ್ದ ಕೋವಿಯಿಂದ ಮಧು ಮೇಲೆ ಗುಂಡು ಹಾರಿಸಿದ್ದಾರೆ. ಮಧು ಸ್ಥಳದಲ್ಲೇ ಮೃತಪಟ್ಟರೆ, ಯಶೋಧ ತೀವ್ರ ಗಾಯಗೊಂಡಿದ್ದರು. ವಿಷಯ ತಿಳಿದ ಗ್ರಾಮಸ್ಥರು ಯಶೋಧ ಅವರನ್ನು ಗೋಣಿಕೊಪ್ಪ ಅಸ್ಪತ್ರೆ ದಾಖಲು ಮಾಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಾಗರ್ ಅವರ ಮೃತ ದೇಹವನ್ನು ಪೊಲೀಸರು, ಗ್ರಾಮಸ್ಥರ ನೆರವಿನಿಂದ ಹೊರತೆಗೆದಿದ್ದಾರೆ. ಈ ಸಂಬಂಧ ಪೊನ್ನಂಪೇಟೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರಂಗಕರ್ಮಿ ಜಿ.ಕೆ.ಗೋವಿಂದ ರಾವ್ ಇನ್ನಿಲ್ಲ

Comments

Leave a Reply

Your email address will not be published. Required fields are marked *