ಕಾಲುವೆಯಲ್ಲಿ ಮೊಸಳೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು

ರಾಯಚೂರು: ಜಿಲ್ಲೆಯ ಲಿಂಗಸುಗೂರಿನ ದೇವರಭೂಪುರ ಬಳಿ ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಗ್ರಾಮದ ಜನ ಕಾಲುವೆ ನೀರನ್ನು ಹೆಚ್ಚು ಅವಲಂಬಿಸಿರುವುದರಿಂದ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.

ನಿತ್ಯ ಕಾಲುವೆಯಲ್ಲಿ ಮಹಿಳೆಯರು ಬಟ್ಟೆ ತೊಳೆಯುತ್ತಾರೆ. ಇದೇ ಕಾಲುವೆಯಲ್ಲಿ ಮಕ್ಕಳು, ಯುವಕರು ಈಜಾಡುವುದರಿಂದ ಎಲ್ಲರಲ್ಲಿ ಆತಂಕ ಹೆಚ್ಚಾಗಿದೆ. ಮಹಿಳೆಯರು ಬಟ್ಟೆ ತೊಳೆಯುವ ಕೂಗಳೆತೆ ದೂರದಲ್ಲಿ ಮೊಸಳೆ ಕಾಣಿಸಿಕೊಂಡಿದೆ. ಕಾಲುವೆಯಲ್ಲಿ ಮೊಸಳೆ ಕಂಡು ಮಹಿಳೆಯರು ಹೆದರಿದ್ದಾರೆ. ಇದನ್ನೂ ಓದಿ: ಕುರುಬ ಸಮಾಜ ಹರಾಜು ಹಾಕೋ ಕೆಲಸ ಮಾಡ್ತಿದ್ದಾರೆ ಸಿದ್ದರಾಮಯ್ಯ: ಎಚ್.ವಿಶ್ವನಾಥ್ ಕಿಡಿ

ಅಪಾಯದ ಮುನ್ನಚ್ಚರಿಕೆ ಇರುವುದರಿಂದ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಮೊಸಳೆ ಸೆರೆಗೆ ಮುಂದಾಗಬೇಕಿದೆ. ಮೊಸಳೆಯನ್ನು ಹಿಡಿಯುವಂತೆ ಗ್ರಾಮಸ್ಥರು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಕಲಿ ನೋಟುಗಳನ್ನು ಜೆರಾಕ್ಸ್ ಮಾಡಿ ವಂಚನೆ ಮಾಡುತ್ತಿದ್ದ ಗ್ಯಾಂಗ್ ಅಂದರ್

Comments

Leave a Reply

Your email address will not be published. Required fields are marked *