ಅಪ್ಪು ಸಣ್ಣ ವಯಸ್ಸಿನಲ್ಲಿ ನಮ್ಮನ್ನು ಬಿಟ್ಟು ಹೋದ್ರು: ಜಯಪ್ರದಾ

ಬೆಂಗಳೂರು: ನಟಿ ಜಯಪ್ರದಾ ಅವರು ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರ ನಿಧನದ ಹಿನ್ನಲೆ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಪ್ಪು ನಮ್ಮ ಜೊತೆಯಲ್ಲಿ ಇಲ್ಲ ಎನ್ನುವುದು ತುಂಬಾ ಕಷ್ಟವಾಗಿದೆ. ಈ ಕುಟುಂಬ ಎಂದರೆ ನನಗೆ ತುಂಬಾ ಇಷ್ಟವಾಗಿದೆ. ರಾಜ್‍ಕುಮಾರ್, ಪಾರ್ವತಮ್ಮ ರಾಜ್‍ಕುಮಾರ್ ಅವರ ಈ ಕುಟುಂಬದಲ್ಲಿ ನಾನು ಒಬ್ಬಳಾಗಿದ್ದೇನು. ಅಪ್ಪ ಇಂದು ಇಲ್ಲ ಎನ್ನುವುದು ತುಂಬಾ ಕಷ್ಟವಾಗಿದೆ ಎಂದು ಕಣ್ಣಂಚಲಿ ನೀರು ತುಂಬಿಕೊಂಡಿದ್ದಾರೆ. ಇದನ್ನೂ ಓದಿ: ಅಪ್ಪು ಸಮಾಧಿ ಬಳಿಯೇ ಮದುವೆಯಾಗಲು ಆಗಮಿಸಿದ ಪ್ರೇಮಿಗಳು

ಸಣ್ಣ ವಯಸ್ಸಿನಲ್ಲಿ ನಮ್ಮನ್ನು ಬಿಟ್ಟು ಹೋಗಿದ್ದಾರೆ. ನಾನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಕುಟುಂಬದವರು ಕಷ್ಟದಲ್ಲಿ ಧರ್ಯ ತೆಗೆದುಕೊಳ್ಳಬೇಕು. ಅಪ್ಪು ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾನು ಮನಸ್ಪೂರ್ತಿಯಾಗಿ ಕೇಳಿಕೊಳ್ಳುತ್ತಿದ್ದೇನೆ ಎಂದು ಹೇಳುತ್ತಾ ಅಪ್ಪು ನಿಧನದಕುರಿತಾಗಿ ಕಂಬನಿ ಮೀಡಿದಿದ್ದಾರೆ. ಇದನ್ನೂ ಓದಿ: ಒಬ್ಬ ಡ್ಯಾನ್ಸರ್ ಬರಬಹುದು, ಫೈಟರ್ ಬರಬಹುದು, ಆದ್ರೆ ಅಪ್ಪು ಬರಲ್ಲ: ರಮೇಶ್ ಅರವಿಂದ್

ಪುನೀತ್ ರಾಜಕುಮಾರ್ ಸಮಾಧಿಯ ದರ್ಶನ ಪಡೆದು, ಚಿತ್ರರಂಗದ ಹಲವರು ನಮನ ಸಲ್ಲಿಸುತ್ತಿದ್ದಾರೆ. ಸ್ಯಾಂಡಲ್‍ವುಡ್ ಮಾತ್ರವಲ್ಲದೇ ಬೇರೆ ಭಾಷಯೆ ನಟ, ನಟಿಯರು ಅಪ್ಪು ಮನೆಗೆ ಭೇಟಿಕೊಟ್ಟು ಕುಟುಂಸ್ಥರಿಗೆ ಸಾಂತ್ವನ ಹೇಳುತ್ತಿದ್ದಾರೆ.

Comments

Leave a Reply

Your email address will not be published. Required fields are marked *