ರಸ್ತೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ 62 ಗಂಟೆ ನಂತರ ಪತ್ತೆ

ಚಿಕ್ಕಬಳ್ಳಾಪುರ: ರಸ್ತೆಯ ಮೇಲೆ ಹರಿಯೋ ನೀರಲ್ಲಿ ಕೊಚ್ಚಿ ಹೋಗಿದ್ದ ಚಿಕ್ಕಬಳ್ಳಾಪುರ ತಾಲೂಕಿನ ಕಮ್ಮಗುಟ್ಟಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಗಂಗಾಧರ್ ಮೃತದೇಹ 62 ಗಂಟೆಗಳ ನಂತರ ಪತ್ತೆಯಾಗಿದೆ.

ಕಳೆದ ಶುಕ್ರವಾರ ನವೆಂಬರ್ 12 ರಂದು ಸಂಜೆ 07 ಗಂಟೆ ಸುಮಾರಿಗೆ ರಾಮಪಟ್ಟಣದಿಂದ ಸ್ವಗ್ರಾಮ ನವಿಲುಗುರ್ಕಿಗೆ ತೆರಳುವ ವೇಳೆ ಜಿಗಾನಹಳ್ಳಿ ಬಳಿ ರಸ್ತೆಯ ಮೇಲೆ ಹರಿಯುತ್ತಿದ್ದ ನೀರಲ್ಲಿ ಬೈಕ್ ಸಮೇತ ಗಂಗಾಧರ್ ಕೊಚ್ಚಿ ಹೋಗಿದ್ದರು. ಕಳೆದ ಶುಕ್ರವಾರದಿಂದ ಆಗ್ನಿಶಾಮಕ ದಳ ಸಿಬ್ಬಂದಿ, ಎನ್‍ಡಿಆರ್‍ಎಫ್ ಹಾಗೂ ಎಸ್‍ಡಿಆರ್‍ಎಫ್ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿದ್ದು, ಇಂದು ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ:  ದೆಹಲಿಯಲ್ಲಿ ಮಿತಿ ಮೀರಿದ ವಾಯು ಮಾಲಿನ್ಯ

ಘಟನೆ ನಡೆದ ಜಾಗದಿಂದ ನೀರು ಸೇರುವ ಗುಡಿಬಂಡೆ ಅಮಾನಿ ಭೈರಸಾಗರದ ಕೆರೆಯವರೆಗೂ ಇಂಚಿಂಚು ಪರಿಶೀಲನೆ ನಡೆಸಿದ ಸಿಬ್ಬಂದಿಗೆ ಅಮಾನಿ ಭೈರಸಾಗರ ಕೆರೆಯ ಹಿನ್ನೀರಿನ ಪೊದೆಯೊಂದರ ಬಳಿ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Comments

Leave a Reply

Your email address will not be published. Required fields are marked *