ನಾವು ನಿಮ್ಮನ್ನು ಹತ್ಯೆ ಮಾಡುತ್ತೇವೆ – ಗಂಭೀರ್‌ಗೆ ಐಸಿಸ್ ಕಾಶ್ಮೀರದಿಂದ ಜೀವ ಬೆದರಿಕೆ

ನವದೆಹಲಿ: ಐಸಿಸ್ ಕಾಶ್ಮೀರದಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಬಿಜೆಪಿ ಸಂಸದ ಗೌತಮ್ ಗಂಭೀರ್ ದೂರು ದಾಖಲಿಸಿದ್ದಾರೆ. ಈ ಬಗ್ಗೆ ದೆಹಲಿ ಪೊಲೀಸರು ಗಂಭೀರ್ ಅವರ ಮನೆಗೆ ಹೆಚ್ಚಿನ ಭದ್ರತೆ ನೀಡಿತನಿಖೆ ಪ್ರಾರಂಭಿಸಿದ್ದಾರೆ.

ಗೌತಮ್ ಗಂಭೀರ್‌ಗೆ ಬಂದಿರುವ ಬೆದರಿಕೆಯ ಮೇಲ್‍ಗಳ ಕುರಿತು ತನಿಖೆ ನಡೆಸುತ್ತಿದ್ದೇವೆ. ಅಷ್ಟೇ ಅಲ್ಲದೇ ಗಂಭೀರ್ ಮನೆಗೆ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ ಎಂದು ಎಂದು ಕೇಂದ್ರ ಡಿಸಿಪಿ ಶ್ವೇತಾ ಚೌಹಾಣ್ ಮಾಹಿತಿಯನ್ನು ನೀಡಿದರು.

ನ.23ರಂದು ರಾತ್ರಿ 9:32ರ ವೇಳೆಗೆ ನನ್ನ ಅಧಿಕೃತ ಖಾತೆಗೆ ಐಸಿಸ್ ಕಾಶ್ಮಿರದಿಂದ ಇ-ಮೇಲ್ ಬಂದಿದೆ ಎಂದು ಗೌತಮ್ ಗಂಭೀರ್ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಅಂಬರೀಶ್ ಹೆಸರಲ್ಲಿ ಏನೂ ಮಾಡಿಲ್ಲ ಅನ್ನೋ ಬೇಸರ ಅಭಿಮಾನಿಗಳಲ್ಲಿದೆ: ಸುಮಲತಾ

ಮೇಲ್‍ನಲ್ಲಿ ಏನಿದೆ?
ನಾವು ನಿಮ್ಮನ್ನು ಹಾಗೂ ನಿಮ್ಮ ಕುಟುಂಬವನ್ನು ಕೊಲ್ಲಲಿದ್ದೇವೆ ಎಂದು ಮೇಲ್‍ನಲ್ಲಿ ಬರೆಯಲಾಗಿದೆ.

ಕಟ್ಟಾ ರಾಷ್ಟ್ರೀಯವಾದಿಯಾದ 40 ವರ್ಷ ವಯಸ್ಸಿನ ಕ್ರಿಕೆಟಿಗ ಹಾಗೂ ರಾಜಕಾರಣಿ ಗೌತಮ್ ಗಂಭೀರ್ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದನೆಯ ಬಗ್ಗೆ ತೀವ್ರವಾಗಿ ಖಂಡಿಸಿದ್ದರು. ಜೊತೆಗೆ ಭಯೋತ್ಪಾದನೆ ನಿಯಂತ್ರಣಗೊಳ್ಳುವವರೆಗೂ ಪಾಕ್‍ನೊಂದಿಗೆ ಯಾವುದೇ ರೀತಿಯ ಸಂಬಂಧವನ್ನು ಇಟ್ಟುಕೊಳ್ಳಬಾರದು ಎಂದು ತಿಳಿಸಿದ್ದರು. ಇದನ್ನೂ ಓದಿ: ಭಾರತದಲ್ಲಿ ಮೂರನೇ ಅಲೆ ಸಾಧ್ಯತೆ ಕಡಿಮೆ: ಗುಲೇರಿಯಾ

ಈ ಹಿಂದೆ 2019ರ ಡಿಸೆಂಬರ್ ತಿಂಗಳಲ್ಲೂ ಗಂಭೀರ್ ಅವರಿಗೆ ಅಂತರಾಷ್ಟ್ರೀಯ ಸಂಖ್ಯೆಯಿಂದ ಜೀವ ಬೆದರಿಕೆಯ ಕರೆಗಳು ಬಂದಿದ್ದವು. ಆಗಲೂ ದೂರು ದಾಖಲಾಗಿದ್ದು, ಪೊಲೀಸ್ ಬಿಗಿ ಭದ್ರತೆಯನ್ನು ನೀಡಿತ್ತು.

Comments

Leave a Reply

Your email address will not be published. Required fields are marked *