ಸಿನಿಮಾ ವೀಕ್ಷಣೆ ವೇಳೆ ಜಾರಿ ಬಿದ್ದು ಯುವಕ ಸಾವು

ಚಿತ್ರದುರ್ಗ: ಸಿನಿಮಾ ವೀಕ್ಷಣೆ ವೇಳೆ ಜಾರಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಮರ್ಲಹಳ್ಳಿ ನಿವಾಸಿ ಮಾರೇಶ್ (29) ಮೃತ ದುರ್ದೈವಿ. ಮಾರೇಶ್ ತೆಲುಗು ನಟ ಬಾಲಕೃಷ್ಣ ಅಭಿಮಾನಿಯಾಗಿದ್ದನು. ಬಾಲಕೃಷ್ಣ ಅಭಿನಯದ ಅಖಂಡ ಸಿನಿಮಾ ವೀಕ್ಷಿಸಲು ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದ ಭಾಗ್ಯಲಕ್ಷ್ಮಿ ಚಿತ್ರಮಂದಿರಕ್ಕೆ ಆಗಮಿಸಿದ್ದನು. ಥಿಯೇಟರ್‌ನಲ್ಲಿ ಡ್ಯಾನ್ಸ್ ಮಾಡುವಾಗ ಮಾರೇಶ್ ಕಾಲು ಜಾರಿ ಬಿದ್ದಿದ್ದಾನೆ.

ಕೆಳಗಿದ್ದ ಕಬ್ಬಿಣದ ಸಲಾಖೆ ತಗುಲಿ ಗಂಭೀರ ಗಾಯಗಳಾಗಿತ್ತು. ಕಬ್ಬಿಣದ ಸಲಾಖೆ ಮೇಲೆ ಬಿದ್ದ ಮಾರೇಶ್‌ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ತೀವ್ರ ರಕ್ತಸ್ರಾವದಿಂದಾಗಿ ಆಸ್ಪತ್ರೆಯಲ್ಲೇ ಬಾಲಕೃಷ್ಣ ಅಭಿಮಾನಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ- ನಾಲ್ಕೇ ದಿನದಲ್ಲಿ 7 ಲಕ್ಷಕ್ಕೂ ಅಧಿಕ ದಂಡ ವಸೂಲಿ

ಘಟನೆ ಕುರಿತು ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *