ಹೆಲಿಕಾಪ್ಟರ್‌ ದುರಂತದಲ್ಲಿ ಮಡಿದವರ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್‌ ಅಪಘಾತ!

ಚೆನ್ನೈ: ವಾಯುಪಡೆ ಹೆಲಿಕಾಪ್ಟರ್‌ ಪತನ ದುರಂತದಿಂದ ಮೃತಪಟ್ಟವರ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್‌ ಅಪಘಾತಕ್ಕೀಡಾಗಿರುವ ಘಟನೆ ತಮಿಳುನಾಡಿನ ಮೆಟ್ಟುಪಾಳಯಂನಲ್ಲಿ ನಡೆದಿದೆ.

ಕೂನೂರು ವಿಲ್ಲಿಂಗ್‌ಟನ್‌ನ ಎಂಆರ್‌ಸಿಯಿಂದ ಪಾರ್ಥಿವ ಶರೀರಗಳನ್ನು ಅಂಬುಲೆನ್ಸ್‌ನಲ್ಲಿ ಸೂಳೂರು ಏರ್‌ಬೇಸ್‌ಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಬೆಂಗಾವಲು ವಾಹನ ಅಪಘಾತದಕ್ಕೀಡಾಗಿದೆ. ಇದರಿಂದಾಗಿ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್‌ಗೂ ಅಪಘಾತವಾಗಿದೆ. ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಬಿಪಿನ್‌ ರಾವತ್‌ ಕುಡಿಯಲು ನೀರು ಕೇಳಿದ್ದರು- ಪ್ರತ್ಯಕ್ಷದರ್ಶಿ ಮಾತು

ಅಂಬುಲೆನ್ಸ್‌ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ ಹೊಡೆದಿದ್ದು, ಅದರ ಮುಭಾಂಗ ಜಖಂಗೊಂಡಿದೆ. ಇದರಿಂದ ಸಂಚಾರ ವಿಳಂಬವಾಯಿತು. ಅಂಬುಲೆನ್ಸ್‌ನಲ್ಲಿದ್ದ ಪಾರ್ಥಿವ ಶರೀರಗಳನ್ನು ಮತ್ತೊಂದು ವಾಹನಕ್ಕೆ ಸ್ಥಳಾಂತರಿಸಿ ರವಾನೆ ಮಾಡಲಾಯಿತು. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತದ ಬಗ್ಗೆ ಸಂಸತ್‍ನಲ್ಲಿ ಮಾಹಿತಿ ನೀಡಿದ್ರು ರಾಜನಾಥ್ ಸಿಂಗ್

ಅಪಘಾತದಿಂದಾಗಿ ಏಳು ಮಂದಿ ಪೊಲೀಸ್‌ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತಕ್ಕೀಡಾದ ಅಂಬುಲೆನ್ಸ್‌ನಿಂದ ಮತ್ತೊಂದು ವಾಹನಕ್ಕೆ ಪಾರ್ಥಿವ ಶರೀರಗಳನ್ನು ಸ್ಥಳಾಂತರಿಸಲು ಸ್ಥಳೀಯರು ಸಹಾಯ ಮಾಡಿದರು. ಇದನ್ನೂ ಓದಿ: ಇಂದು ಸಂಜೆ ದೆಹಲಿಗೆ ರಾವತ್ ಪಾರ್ಥಿವ ಶರೀರ – ನಾಳೆ ಮಧ್ಯಾಹ್ನವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ ಮತ್ತು ಅವರ ಪತ್ನಿ ಸೇರಿದಂತೆ ಉಳಿದ ಸೇನಾ ಸಿಬ್ಬಂದಿ ಪಾರ್ಥಿವ ಶರೀರಗಳನ್ನು ಇಂದು ದೆಹಲಿಗೆ ರವಾನಿಸಲಾಗುತ್ತದೆ. ಅಂತಿಮ ದರ್ಶನದ ಬಳಿಕ ಸೇನಾ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ.

Comments

Leave a Reply

Your email address will not be published. Required fields are marked *