ಎಸ್‌ಡಿಪಿಐ ಕಾರ್ಯಕರ್ತನ ಹತ್ಯೆ ಪ್ರಕರಣ – ಇಬ್ಬರು ಆರ್‌ಎಸ್‌ಎಸ್‌ ಮುಖಂಡರು ಅರೆಸ್ಟ್‌

ತಿರುವನಂತಪುರಂ: ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ರಾಜ್ಯ ಕಾರ್ಯದರ್ಶಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರ್‌ಎಸ್‌ಎಸ್‌ ಮುಖಂಡರನ್ನು ಕೇರಳದ ಅಲ್ಪುಜಾದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಎಸ್‌ಡಿಪಿಐನ ರಾಜ್ಯ ಕಾರ್ಯದರ್ಶಿ ಕೆ.ಎಸ್.ಶಾನ್‌ ಕೊಲೆಯಾದ ವ್ಯಕ್ತಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್‌ ಮುಖಂಡರಾದ ತ್ರಿಶೂರ್‌ ಜಿಲ್ಲೆಯ ಕೆ.ಟಿ.ಸುರೇಶ್‌, ಎಂ.ಸುರೇಶ್‌ ಎಂದು ಗುರುತಿಸಲಾಗಿದೆ. ತ್ರಿಶೂರ್‌ ಜಿಲ್ಲೆಯ ಅಡಗುತಾಣದಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಈ ಹಿಂದೆಯೂ, ಕೊಲೆಯಾದ ವ್ಯಕ್ತಿಯ ತವರು ಆಲಪ್ಪುಳದ ಮನ್ನಂಚೇರಿ ಗ್ರಾಮದಲ್ಲಿ ಇಬ್ಬರು ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ತೆರಿಗೆ ದಾಳಿ, 150 ಕೋಟಿ ನಗದು ವಶ – ಕಂತೆ ಕಂತೆ ನೋಟುಗಳ ಪತ್ತೆ

ಶಾನ್‌ ಹತ್ಯೆಯಾದ ನಂತರ 12 ಗಂಟೆಗಳ ಅವಧಿಯಲ್ಲಿ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ರಂಜಿತ್‌ ಶ್ರೀನಿವಾಸನ್‌ ಅವರನ್ನು ಪ್ರತೀಕಾರವಾಗಿ ಹತ್ಯೆ ಮಾಡಲಾಗಿದೆ. ರಂಜಿತ್‌ ಹತ್ಯೆಗೆ ಸಂಬಂಧಿಸಿದಂತೆ ಎಸ್‌ಡಿಪಿಐನ ಐವರು ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಆಲಪ್ಪುಳದಲ್ಲಿ ನಡೆದ ಹತ್ಯೆ ಪ್ರಕರಣದ ಇನ್ನೂ ಅನೇಕ ಆರೋಪಿಗಳು ಬೇರೆ ರಾಜ್ಯಗಳಲ್ಲಿ ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗಾಗಿ ವಿಶೇಷ ತಂಡಗಳನ್ನು ಬೇರೆ ರಾಜ್ಯಗಳಿಗೆ ನಿಯೋಜಿಸಲಾಗಿದೆ ಎಂದು ಎಡಿಜಿಪಿ ವಿಜಯ್‌ ಶಕರೆ ತಿಳಿಸಿದ್ದಾರೆ. ಇದನ್ನೂ ಓದಿ: ಪತಿಯನ್ನು ಬಚಾವ್ ಮಾಡಲು ಪೊಲೀಸರಿಗೆ ಖಾರದ ಪುಡಿ ಎರಚಿದ್ಲು

Comments

Leave a Reply

Your email address will not be published. Required fields are marked *