ಪಾಕಿಸ್ತಾನದ ಮುಸಲ್ಮಾನರೂ ಘರ್ ವಾಪಸಿ ಆಗಬೇಕು: ತೇಜಸ್ವಿ ಸೂರ್ಯ

ಉಡುಪಿ: ಪಾಕಿಸ್ತಾನದ ಮುಸಲ್ಮಾನರೂ ಘರ್ ವಾಪಸಿ ಆಗಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.

ಉಡುಪಿಯಲ್ಲಿ ಪರ್ಯಾಯ ಅದಮಾರು ಮಠದ ವಿಶ್ವರೂಪಂ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಸಂಸ್ಕೃತಿ, ಸಮಾಜ, ಪರಂಪರೆ ಉಳಿಬೇಕಾದರೇ ಹಿಂದೂ ಧರ್ಮ ಉಳಿಯಬೇಕು. ಇದಕ್ಕಾಗಿ ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು. ಜೊತೆಗೆ ಚೀನಾ, ಜಪಾನಿಗೆ ಹೋಗಿ ಮತಾಂತರಗೊಂಡವರನ್ನು ಭಾರತಕ್ಕೆ ವಾಪಸ್ ಕರೆಸಿಕೊಳ್ಳಬೇಕು. ಮುಸ್ಲಿಮರು, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದರು.

ಟಿಪ್ಪುವಿನ ಖಡ್ಗದ ಕಾರಣಕ್ಕೆ ಬಹಳ ಮತಾಂತರಗಳು ಆಗಿವೆ. ಅಸಾಧ್ಯ ಎನ್ನುವುದು ಯಾವುದೂ ಇಲ್ಲ. ಇದರಿಂದಾಗಿ ಟಿಪ್ಪು ಜಯಂತಿಯಂದೇ ನಾವು ಹಿಂದೂ ಧರ್ಮಕ್ಕೆ ಮರುಮತಾಂತರ ಮಾಡಬೇಕು. ನಾವು ದೊಡ್ಡದಾಗಿ ಕನಸನ್ನು ಕಾಣಬೇಕು. ನಮ್ಮ ಮನೆಯ ಅಕ್ಕಪಕ್ಕ, ಗ್ರಾಮ, ಊರುಗಳಲ್ಲಿ ಘರ್ ವಾಪಸಿ ಮಾಡಬೇಕು ಎಂದು ತಿಳಿಸಿದರು. ದನ್ನೂ ಓದಿ: ಬಾಬರ್‌ನ ಆಕ್ರಮಣ ಭಾರತಕ್ಕೆ ಒಡ್ಡಿದ ಅಪಾಯವನ್ನು ಗುರುನಾನಕ್‌ ಅರಿತಿದ್ದರು: ಮೋದಿ

ದೇಶದಲ್ಲಿ ರಾಮಮಂದಿರವನ್ನು ಸ್ಥಾಪನೆ ಮಾಡಿದ್ದೇವೆ. ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ಕಾಯ್ದೆಯನ್ನು ತೆಗೆದುಹಾಕಿದ್ದೇವೆ. ಘರ್ ವಾಪಸಿ ಆದ್ಯ ಕರ್ತವ್ಯದ ರೀತಿಯಲ್ಲಿ ನಾವು ಮಾಡಬೇಕಾಗಿದೆ. ಪಾಕಿಸ್ತಾನದ ಮುಸಲ್ಮಾನರನ್ನು ಹಿಂದೂಗಳಾಗಿ ಪರಿವರ್ತನೆ ಮಾಡಬೇಕು. ಅಖಂಡ ಭಾರತದ ಕಲ್ಪನೆಯಲ್ಲಿ ಪಾಕಿಸ್ತಾನವು ಇದೆ. ಮಠ, ದೇವಸ್ಥಾನ ಇದರ ಮುಂದಾಳತ್ವ ವಹಿಸಬೇಕು ಎಂದು ಸಲಹೆ ನೀಡಿದರು. ದನ್ನೂ ಓದಿ: ಡಿ.28 ರಿಂದ ರಾಜ್ಯದಲ್ಲಿ 10 ದಿನ ನೈಟ್ ಕರ್ಫ್ಯೂ ಜಾರಿ – ನ್ಯೂ ಇಯರ್ ಪಾರ್ಟಿಗಳಿಗೆ ಬ್ರೇಕ್

Comments

Leave a Reply

Your email address will not be published. Required fields are marked *