ಅಧಿಕಾರದಲ್ಲಿದ್ದಾಗ ಕುಂಭಕರ್ಣ ನಿದ್ದೆ, ಈಗ ಮೇಕೆದಾಟು ಹೋರಾಟ: ಡಿಕೆಶಿಗೆ ಕಾರಜೋಳ ಟಾಂಗ್

ಚಿತ್ರದುರ್ಗ: ಎಲ್ಲರಿಗೂ ಹೋರಾಟ ಮಾಡುವ ಹಕ್ಕಿದೆ. ಪ್ರಾಣ ಕಳೆದುಕೊಳ್ಳುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವ ಗೋವಿಂದ ಕಾರಜೋಳ ಟಾಂಗ್ ಕೊಟ್ಟಿದ್ದಾರೆ.

ಪ್ರಾಣ ಹೋದರೂ ಮೇಕೆದಾಟು ಹೋರಾಟ ಬಿಡಲ್ಲ ಎಂದು ಡಿಕೆಶಿ ಹೇಳಿಕೆಯನ್ನು ಕೊಟ್ಟಿದ್ದರು. ಈ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಕಾರಜೋಳ ಅವರು, ಎಲ್ಲರಿಗೂ ಹೋರಾಟ ಮಾಡುವ ಹಕ್ಕಿದೆ. ಪ್ರಾಣ ಕಳೆದುಕೊಳ್ಳುವ ಅಗತ್ಯವಿಲ್ಲ. ಕಾಂಗ್ರೆಸ್ 2013 ರಿಂದ 18ರವರೆಗೆ ರಾಜ್ಯದಲ್ಲಿ ಆಡಳಿತ ನಡೆಸಿದೆ. ಆಗ ನೀರಾವರಿ ಯೋಜನೆ ಬಗ್ಗೆ ಗಮನಹರಿಸದೇ ಕಾಂಗ್ರೆಸ್ ಅವರು ಕುಂಭಕರ್ಣ ನಿದ್ದೆ ಮಾಡುತ್ತಿದ್ದರು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಭೂಮಿಯ ಸಮೀಪದಿಂದ ಹಾದುಹೋಗಲಿದೆ ಪರಮಾಣು ಬಾಂಬ್‌ಗಿಂತ 30 ಪಟ್ಟು ಹೆಚ್ಚು ಶಕ್ತಿಯ ಕ್ಷುದ್ರಗ್ರಹ

ಮೇಕೆದಾಟು ಹೋರಾಟ ಕಾಂಗ್ರೆಸ್‍ನ ರಾಜಕೀಯದ ಗಿಮಿಕ್ ಆಗಿದೆ. ತಮಿಳುನಾಡಿನಲ್ಲಿ ಡಿಎಂಕೆ(ದ್ರಾವಿಡ ಮುನ್ನೇತ್ರ ಕಳಗಂ) ಜೊತೆ ಸೇರಿ ಕಾಂಗ್ರೆಸ್ ಸರ್ಕಾರ ರಚಿಸಿದೆ. ತಮಿಳುನಾಡು ಕ್ಯಾತೆ ತೆಗೆಯದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಬುದ್ದಿ ಹೇಳಲಿ. ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಊರ ಹೊರಗಡೆ ಇದ್ದಾರೆ. ಅಣ್ಣಾಮಲೈ ಸರ್ಕಾರದಲ್ಲಿಲ್ಲ. ಚುನಾಯಿತ ಪ್ರತಿನಿಧಿ ಅಲ್ಲ. ಅದಕ್ಕೆ ಸಿದ್ದರಾಮಯ್ಯ, ಡಿಎಂಕೆ ಸೇರಿ ಸಹಕರಿಸಿ ಕರ್ನಾಟಕಕ್ಕೆ ಉಪಕರಿಸಲಿ ಎಂದು ತಿಳಿಸಿದರು.

BJP - CONGRESS

ಮೇಕೆದಾಟು ಹೋರಾಟಕ್ಕೆ ಇಬ್ಬರಾದರೂ ಹೋಗಲಿ. ಇನ್ನೂರು ಜನರಾದರೂ ಹೋಗಲಿ. ಕಾಂಗ್ರೆಸ್ ಅವರು ಭ್ರಮೆ ಹುಟ್ಟಿಸಿ ಜನರಿಗೆ ಮೋಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಹೊಣೆಗೇಡಿತನದಿಂದ ರಾಜ್ಯದ ಯೋಜನೆಗಳು, ಪ್ರಗತಿ ಕುಂಠಿತವಾಗಿದೆ. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ. ಗಿಮಿಕ್ ಮಾಡಿ ಜನರ ಮನ ಗೆಲ್ಲಲಾಗದು. ಜನ ಪಾಠ ಕಲಿಸುತ್ತಾರೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಸೆಲ್ಫ್ ಕೋವಿಡ್ ಟೆಸ್ಟಿಂಗ್ ಮಾಡಿಕೊಳ್ಳುವವರಿಗೆ ಮಾರ್ಗಸೂಚಿ ನೀಡಬೇಕು: ಡಾ.ವಿಶಾಲ್ ರಾವ್

Comments

Leave a Reply

Your email address will not be published. Required fields are marked *