ನಿಂತಿದ್ದ ಲಾರಿಗೆ ಎರಡು ಕಾರು ಡಿಕ್ಕಿ – ನಾಲ್ವರು ಸಾವು, 6 ಜನರಿಗೆ ಗಾಯ

ಹಾವೇರಿ: ಎರಡು ಕಾರು ಮತ್ತು ಮೆಕ್ಕೆಜೋಳ ತುಂಬಿದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದ ಬಳಿ ನಡೆದಿದೆ.

ಒಂದರ ಹಿಂದೆ ಒಂದು ಚಲಿಸುತ್ತಿದ್ದ ಕಾರುಗಳು, ಮೆಕ್ಕೆಜೋಳ ತುಂಬಿದ ಲಾರಿಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಶಂಕರಗೌಡ ನಾಗಪ್ಪಗೌಡರ (35), ಪುನೀತ ಹರಮುಚಡಿ (12), ಶಾಂತಮ್ಮ ಹೊಟ್ಟಿಗೌಡರ (32), ರಘು ಹೊಟ್ಟಿಗೌಡರ (14), ಎಂದು ಗುರುತಿಸಲಾಗಿದೆ. ಆರು ಜನ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗ ಆಸ್ಪತ್ರೆಗೆ ಸೇರಿಸಲಾಗಿದೆ. ಇದನ್ನೂ ಓದಿ: ಸರ್ಕಾರದ ಆದೇಶಕ್ಕೆ ಡೋಂಟ್ ಕೇರ್ – ಬಿಜೆಪಿ ಶಾಸಕ ಎಮ್ಮೆ ಓಡಿಸುವ ಸ್ಪರ್ಧೆಯಲ್ಲಿ ಬ್ಯುಸಿ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮತ್ತಿಕೋಟೆ ಗ್ರಾಮದ ಒಂದೇ ಕುಟುಂಬದ ಸೋದರ ಸಂಬಂಧಿಗಳು ಎರಡು ಕಾರಿನಲ್ಲಿ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಉಕ್ಕಡಗಾತ್ರಿ ದೇವಸ್ಥಾನಕ್ಕೆ ಹೋಗಿ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ರಟ್ಟೀಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಪಿಜ್ಜಾ ಆರ್ಡರ್‌ ಮಾಡುವಾಗ 9,000 ಹೋಯ್ತು – ವಾಪಸ್‌ ಪಡೆಯಲು ಹೋಗಿ 11 ಲಕ್ಷ ಕಳ್ಕೊಂಡ ವೃದ್ಧೆ

Comments

Leave a Reply

Your email address will not be published. Required fields are marked *