ಬಿಜೆಪಿಯವರ ಮೇಲೆಯೂ ಕೇಸ್ ಹಾಕಲಿ ಬೇಡ ಅನ್ನಲ್ಲ: ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಬಿಜೆಪಿಯವರ ಮೇಲೆಯೂ ಕೇಸ್ ಹಾಕಲಿ ಬೇಡ ಅನ್ನುವುದಿಲ್ಲ. ಮೇಕೆದಾಟು ಯೋಜನೆ ಪಾದಯಾತ್ರೆಯಿಂದಲೇ ಕೋವಿಡ್ ಆರಂಭವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಶಾಲೆಗಳಿಗೆ 20 ದಿನ ರಜೆ ನೀಡುವಂತೆ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಆಗ್ರಹಿಸಿದ್ದರು. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರೇ ಒಂದೇ ಸರಿ 20 ದಿನ ರಜೆ ತೆಗೆದುಕೊಂಡು ಏನು ಮಾಡುತ್ತೀರಿ. ನಿಮಗೆ ಗೊತ್ತಾ ಮಕ್ಕಳಿಗೆ ಎಷ್ಟರಮಟ್ಟಿಗೆ ತೊಂದರೆ ಆಗುತ್ತದೆ. ನಾನು ಶಾಲಾ ಮಕ್ಕಳನ್ನೇ ಈ ಬಗ್ಗೆ ವಿಚಾರಿಸಿದ್ದೇನೆ. ಅವರು ಶಾಲೆಯಲ್ಲಿ ಹಾಜರಾತಿ ಕಡಿಮೆ ಆಗುತ್ತಿದ್ದು, ಓದಿಗೆ ತೊಂದರೆ ಆಗುತ್ತದೆ. ಶಾಲೆ ಬೇಕು ಎನ್ನುವ ಮಾತನ್ನು ಮಕ್ಕಳೇ ಹೇಳುತ್ತಿದ್ದಾರೆ. ಎಲ್ಲಿ ಕೊರೊನಾ ಜಾಸ್ತಿ ಇದೆಯೋ ಅಲ್ಲಿ ರಜೆ ಕೊಟ್ಟಿದ್ದೇವೆ. ನಗರದ ವ್ಯಾಪ್ತಿಯಲ್ಲಿ ಜಾಸ್ತಿ ಇರುವ ಕಾರಣ 3 ದಿನ ರಜೆ ನೀಡಿದ್ದೇವೆ ಎಂದರು. ಇದನ್ನೂ ಓದಿ: ಹಿಂದೂ ಮಹಿಳೆ, ಮುಸ್ಲಿಂ ವ್ಯಕ್ತಿ ರೈಲಿನಲ್ಲಿ ಪ್ರಯಾಣ – ಲವ್ ಜಿಹಾದ್ ಅಂತ ಠಾಣೆಗೆ ಎಳೆದೊಯ್ದ ಭಜರಂಗದಳ ಸದಸ್ಯರು

ಕೊರೊನಾ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಂತಾ ಹುಡುಕಿಕೊಂಡು ಬರುವುದಿಲ್ಲ. ಯಾರೂ ಯಾರೂ ದೊಡ್ಡ ಸಂಖ್ಯೆಯಲ್ಲಿ ಸೇರುತ್ತಾರೋ ಅಲ್ಲಿ ಒಬ್ಬರಿಂದ ಒಬ್ಬರಿಗೆ ಹರಡುತ್ತಿದೆ. ಯಾರಿಗೆ ಕೇಸ್ ಹಾಕಬೇಕು, ಬಿಡಬೇಕು ಎಂಬುದನ್ನು ಸಂಬಂಧಪಟ್ಟ ಇಲಾಖೆಯವರು ನೋಡಿಕೊಳ್ಳುತ್ತಾರೆ. ಬಿಜೆಪಿಯವರ ಮೇಲೆಯೂ ಕೇಸ್ ಹಾಕಲಿ ಬೇಡ ಅನ್ನುವುದಿಲ್ಲ. ಮೇಕೆದಾಟು ಯೋಜನೆ ಪಾದಯಾತ್ರೆಯಿಂದಲೇ ಕೋವಿಡ್ ಆರಂಭವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ತಜ್ಞರು ಗ್ರೀನ್ ಸಿಗ್ನಲ್ ಕೊಟ್ರೆ ಬೆಂಗಳೂರಿನಲ್ಲಿ ಮರು ದಿನವೇ ಶಾಲೆ ಪ್ರಾರಂಭ: ಬಿಸಿ ನಾಗೇಶ್

ಸಾವಿರಾರು ಜನ ಒಟ್ಟಿಗೆ ಸೇರಿ ಪಾದಯಾತ್ರೆ ನಡೆಸಿದ್ದರಿಂದ ಸಮಸ್ಯೆ ಆಗಿದೆ. ಕೈ ನಾಯಕರು ಯಾರೂ ಮಾಸ್ಕ್ ಹಾಕಿಲ್ಲ, ಅವರೆಲ್ಲರ ಮೇಲೆ ಕೇಸ್ ಹಾಕಿ ಜನರಿಗೆ ತೊಂದರೆ ಆಗದಿರುವಂತಹ ದಿಕ್ಕಿನಲ್ಲಿ ಗಮನಿಸಲಿ. ನಾವು ತಪ್ಪು ಮಾಡಿದರೇ ನಮ್ಮ ಮೇಲೆಯೂ ಕೇಸ್ ಹಾಕಲಿ ಯಾರೂ ಬೇಡ ಅಂತಾರೆ. ಇವತ್ತು ಎಲ್ಲಾ ಮಕ್ಕಳಿಗೂ ಕೋವಿಡ್ ಹರಡುತ್ತಿದೆ. ಕಾಂಗ್ರೆಸ್, ಬಿಜೆಪಿ ಮೇಲೆ ಬಿಜೆಪಿ, ಕಾಂಗ್ರೆಸ್ ಮೇಲೆ ಆಪಾದನೆ ಮಾಡಲು ಮೊದಲು ಎಲ್ಲರೂ ಜಾಗೃತರಾಗಿರಬೇಕು ಎಂದು ಸಿಡಿದರು.

Comments

Leave a Reply

Your email address will not be published. Required fields are marked *