ಮದುವೆ ಮನೆಯಿಂದ ಹೊರಟವರು ಮಸಣ ಸೇರಿದ್ರು

ಭುವನೇಶ್ವರ: ಮದುವೆ ಸಮಾರಂಭಕ್ಕೆ ಹೋಗಿ ವಾಪಸ್ ಆಗುತ್ತಿದ್ದಾಗ, ಭೀಕರವಾದ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಒಡಿಶಾದ ಸೋನಾಪುರ ಜಿಲ್ಲೆಯ ಮಹಾನದಿ ಸೇತುವೆ ಮೇಲೆ ನಡೆದಿದೆ.

ಕಾರು, ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಇನ್ನೂ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಪೊಲೀಸರು ಪ್ರಾಮಾಣಿಕರಾಗಿಲ್ಲದಿದ್ದರೆ, ನಾಗರೀಕರು ನೆಮ್ಮದಿಯಾಗಿ ಇರಲು ಸಾಧ್ಯವಿಲ್ಲ: ಆರಗ ಜ್ಞಾನೇಂದ್ರ

ಸೋನಾಪುರ ಜಿಲ್ಲೆಯ ಉಲ್ಲುಂದಾ ನಿಮ್ನಾ ಗ್ರಾಮದ 10 ಜನರು ಕೌದಿಯಾಮುಂಡ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಮನೆಗೆ ಕಾರ್‌ನಲ್ಲಿ ವಾಪಸ್ ಆಗುತ್ತಿದ್ದರು. ತಡರಾತ್ರಿ 1 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಸೋನಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬುರ್ಲಾ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಗೋವಾ ಚುನಾವಣೆ- ಜಗದೀಶ್ ಶೆಟ್ಟರ್ ಪ್ರಚಾರ, ಮತಯಾಚನೆ

Comments

Leave a Reply

Your email address will not be published. Required fields are marked *