ಸಿಎಂ ಇಬ್ರಾಹಿಂ ಜೆಡಿಎಸ್‍ಗೆ ಬಂದರೆ ಸ್ವಾಗತ: ಹೆಚ್‍ಡಿಕೆ

HDKCM

ಬೆಂಗಳೂರು: ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿರುವ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ಗೆ ಬಂದರೆ ಸ್ವಾಗತ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಇಬ್ರಾಹಿಂ ಮೊದಲಿನಿಂದಲೂ ಜೆಡಿಎಸ್ ಜೊತೆ ಗುರುತಿಸಿಕೊಂಡವರು. ಮಧ್ಯದಲ್ಲಿ ಕೆಲವು ವ್ಯತ್ಯಾಸಗಳು ಆಗಿದ್ದವು. ಈಗ ಮತ್ತೆ ಜೆಡಿಎಸ್ ಜೊತೆ ಸೇರಿದರೆ ಸ್ವಾಗತ ಮಾಡುವೆ ಎಂದರು.

ಇತ್ತ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಸಿಎಂ ಇಬ್ರಾಹಿಂ, ಜೆಡಿಎಸ್ ಸೇರುತ್ತೇನೆ, ಆದರೆ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಶೀಘ್ರದಲ್ಲಿಯೇ ದಿನಾಂಕ ತಿಳಿಸುತ್ತೇನೆ. ಹಣೆಯಲ್ಲಿ ಬರೆದಿದ್ದರೆ ಕುಮಾರಸ್ವಾಮಿ ಸಿಎಂ ಆಗೋದನ್ನ ಯಾರು ತಪ್ಪಿಸೋಕೆ ಆಗುತ್ತೆ ಎಂದಿದ್ದರು. ಇದನ್ನೂ ಓದಿ: ಬೊಮ್ಮಾಯಿನೇ ಹಿಜಬ್ ಹಾಕಿದ್ದಾರೆ: ಸಿಎಂ ಇಬ್ರಾಹಿಂ

ದೇವೇಗೌಡರು ಹಾಗೂ ಕುಮಾರಸ್ವಾಮಿ ಒಂದು ಗುಣ ಅಂದರೆ ಯಾವತ್ತೂ ಡ್ಯಾಮ್‍ಗೆ ಡ್ಯಾಮೇಜ್ ಮಾಡಲ್ಲ. ಅಲ್ಲಿ ನೀರು ಸೋರುತ್ತಿದ್ದರೆ ಬಕೆಟ್ ಹಿಡೀತಾರೆ. ಸೋರಿ ಹೋಗುವ ನೀರಿನಲ್ಲೇ ಬಕೆಟ್ ತುಂಬಿಸಿಕೊಳ್ತಾರೆ ಎಂದು ಹಾಡಿಹೊಗಳಿದ್ದರು.

Comments

Leave a Reply

Your email address will not be published. Required fields are marked *