ಉಕ್ರೇನ್‍ನಿಂದ ತಾಯ್ನಾಡಿಗೆ ಬಂದ್ರು ಭಾರತೀಯರು – ಮುಂಬೈನಲ್ಲಿ ವಿಮಾನ ಲ್ಯಾಂಡಿಂಗ್

ಮುಂಬೈ: ಉಕ್ರೇನ್‍ನಿಂದ 219 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ಏರ್ ಇಂಡಿಯಾ ವಿಮಾನ ಇಂದು ರಾತ್ರಿ ಮುಂಬೈಗೆ ಬಂದಿಳಿದಿದೆ.

ಇಂದು ಮಧ್ಯಾಹ್ನ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‍ನಿಂದ ಭಾರತದ ಪ್ರಜೆಗಳನ್ನು ಹೊತ್ತು ವಿಮಾನ ಟೇಕಾಫ್ ಆಗಿತ್ತು. ಉಕ್ರೇನ್‍ನಿಂದ ಸುರಕ್ಷಿತವಾಗಿ ಸ್ಥಳಾಂತರಿಸಲ್ಪಟ್ಟ ಭಾರತೀಯರನ್ನು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದು ಇಳಿಸಿದೆ. ಈ ವೇಳೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಇದನ್ನೂ ಓದಿ:  ಉಕ್ರೇನ್‍ನಲ್ಲಿ ಸಿಲುಕಿದ್ದಾರೆ ಕೊಡಗಿನ ಒಟ್ಟು 10 ವಿದ್ಯಾರ್ಥಿಗಳು

ರೊಮೇನಿಯಾದಿಂದ ಮೂರು ವಿಮಾನಗಳು ಭಾರತಕ್ಕೆ ಆಗಮಿಸಲಿವೆ. ಈ ಪೈಕಿ ಒಂದು ಮುಂಬೈನಲ್ಲಿ ಲ್ಯಾಂಡ್ ಆಗಿದ್ದು, ಬಾಕಿ ಎರಡು ವಿಮಾನ ದೆಹಲಿಗೆ ಬರಲಿವೆ. ಆ ವಿಮಾನ ಇಂದು ಮಧ್ಯರಾತ್ರಿ ಒಂದು ವಿಮಾನ ದೆಹಲಿ ತಲುಪಿದ್ರೆ. ಮತ್ತೊಂದು ನಾಳೆ ಬೆಳಗ್ಗೆ ಐದು ಗಂಟೆಗೆ ರೊಮೇನಿಯಾದಿಂದ ಹೊರಡಲಿದ್ದು, 27 ರ ಮಧ್ಯರಾತ್ರಿ ತಲುಪಲಿದೆ ಎಂದು ತಿಳಿಸಲಾಗಿದೆ.

ಹಂಗೇರಿಯಿಂದ ಒಂದು ವಿಮಾನ ದೆಹಲಿಗೆ ಆಗಮಿಸಲಿದೆ. ನಾಳೆ ಬೆಳಗ್ಗೆ 6-7 ಗಂಟೆಗೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ. ಇದನ್ನೂ ಓದಿ:  ಫೋನ್‌ನಲ್ಲಿ ಮಾತನಾಡುವಾಗ ಬಾಂಬ್ ಹಾಕುತ್ತಿದ್ದಾರೆ ಎಂದು ಬಂಕರ್‌ಗೆ ಓಡಿ ಹೋದ: ಪೋಷಕರ ಅಳಲು

Comments

Leave a Reply

Your email address will not be published. Required fields are marked *