ಶಿವಕುಮಾರ ಸ್ವಾಮೀಜಿ ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ: ಮೋದಿ

ನವದೆಹಲಿ: ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಗೌರವ ನಮನ ಸಲ್ಲಿಸಿದ್ದಾರೆ.

ಲಿಂಗೈಕ್ಯ ಶಿವಕುಮಾರ ಶ್ರೀಗಳ ಜನ್ಮದಿನೋತ್ಸವ ಹಿನ್ನೆಲೆ, ಕನ್ನಡ ಮತ್ತು ಇಂಗ್ಲೀಷ್‍ನಲ್ಲಿ ಮೋದಿ ಟ್ವೀಟ್ ಮಾಡಿದ್ದಾರೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕವಾಗಿ ನಮನ ಸಿಲ್ಲಿಸಿದ್ದಾರೆ. ಇದನ್ನೂ ಓದಿ: ನಡೆದಾಡುವ ದೇವರ ಗದ್ದುಗೆ ದರ್ಶನ ಪಡೆದ ಗೃಹ ಸಚಿವ ಅಮಿತ್ ಶಾ

ಟ್ವೀಟ್‍ನಲ್ಲಿ ಏನಿದೆ?: ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳು ಅವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರು ಅಸಂಖ್ಯಾತ ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರ ಅಪ್ರತಿಮ ಸಮುದಾಯ ಸೇವೆ ಮತ್ತು ಆರೋಗ್ಯ ಮತ್ತು ಶಿಕ್ಷಣಕ್ಕೆ ಅವರು ನೀಡಿದ ಕೊಡುಗೆಯನ್ನು ನಾವು ಯಾವಾಗಲೂ ಸ್ಮರಿಸುತ್ತೇವೆ. ಅವರ ಕನಸುಗಳನ್ನು ಈಡೇರಿಸಲು ನಾವು ಕೆಲಸ ಮಾಡುತ್ತಲೇ ಇರುತ್ತೇವೆ. ಇದನ್ನೂ ಓದಿ: ಇಂದು ಶಿವಕುಮಾರ ಶ್ರೀಗಳ 115 ನೇ ಜನ್ಮ ದಿನೋತ್ಸವ – ಪೂಜಾ ಕೈಂಕರ್ಯಗಳು ಆರಂಭ

ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಪ್ರಾಮುಖ್ಯ ಹಾಗು ಸರಿಸಾಟಿಯಿಲ್ಲದ ಅವರ ಸಾಮುದಾಯಿಕ ಸೇವೆಯಿಂದಾಗಿ ಅವರು ಸದಾ ಸ್ಮರಣೀಯರು. ಅವರ ಕನಸುಗಳನ್ನು ಈಡೇರಿಸಲು ನಾವು ಶ್ರಮಿಸೋಣ ಎಂದು ಟ್ವೀಟ್ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *