ಪ್ರಾಣಿ ವಧೆ ಮಾಡಿ ತಿನ್ನುವುದರಲ್ಲಿ ಮಾನವೀಯತೆ ಎಲ್ಲಿಂದ ಬಂತು: ದೇವನೂರು

ಮೈಸೂರು: ಧರ್ಮದ ಮುಖವಾಡದಲ್ಲಿ ಅಧರ್ಮ ಕುಣಿದು ಕುಪ್ಪಳಿಸುತ್ತಿದೆ. ಜನ ಸಮುದಾಯದ ವಿವೇಕ ಕಡಿಮೆಯಾಗುತ್ತಿದೆ. ಪ್ರಾಣಿ ವಧೆ ಮಾಡಿ ತಿನ್ನುವುದರಲ್ಲಿ ಮಾನವೀಯತೆ ಎಲ್ಲಿಂದ ಬಂತು ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಹಲಾಲ್ ವಿವಾದದ ಕುರಿತು ಪ್ರಶ್ನಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಾಹಿತಿ, ಕಾನೂನು ಹಾಗೂ ಸುವ್ಯವಸ್ಥೆ ಇದೆ ಎಂದಾದರೆ ಸರ್ಕಾರ ಇಂತಹ ವಿಚಾರವಾಗಿ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಸರ್ಕಾರ ಈ ಬಗ್ಗೆ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ದೇಶದ ಮೊದಲ ಹಸಿರು ಸಂಚಾರಿ ಪಥ ಕಾಮಗಾರಿ: ಜಗದೀಶ್ ಶೆಟ್ಟರ್

ಸರ್ಕಾರ ಜನ ಸಮುದಾಯವನ್ನು ಒಡೆದು ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ವಿರೋಧ ಪಕ್ಷಗಳು ಇದನ್ನೆಲ್ಲಾ ನೋಡಿಕೊಂಡು ಮಂಕಾಗಿ ಕೂತಿದೆ. ಮಾಂಸವನ್ನು ಹಾಗೆ ಕತ್ತರಿಸಬೇಕು ಹೀಗೆ ಕತ್ತರಿಸಬೇಕು ಎಂದು ಹೇಳಲು ಅವರು ಯಾರು ಎಂದು ಮಾಂಸ ತಿನ್ನುವವರೇ ಪ್ರಶ್ನಿಸಿದ್ದಾರೆ. ಮಾಂಸವನ್ನು ಕತ್ತರಿಸುವ ರೀತಿಯಲ್ಲೂ ಮಾನವೀಯತೆ ಇದೆ ಎನ್ನುತ್ತಾರೆ. ಪ್ರಾಣಿ ವಧೆ ಮಾಡಿ ತಿನ್ನುವುದರಲ್ಲಿ ಮಾನವೀಯತೆ ಎಲ್ಲಿಂದ ಬರುತ್ತೆ? ಎಂದು ದೇಮ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಅಚ್ಚೇ ದಿನ್ ಕೊಡ್ತೀವಿ ಎಂದ ಕೇಂದ್ರ ನರಕ ದಿನ ತೋರಿಸುತ್ತಿದೆ: ಡಿಕೆಶಿ

 

Comments

Leave a Reply

Your email address will not be published. Required fields are marked *