ಆಂಧ್ರಪ್ರದೇಶದ ಎಲ್ಲಾ ಸಚಿವರು ರಾಜೀನಾಮೆ

ಅಮರಾವತಿ: ಆಂಧ್ರಪ್ರದೇಶ ಸಂಪುಟದ ಎಲ್ಲಾ 24 ಸಚಿವರು ಗುರುವಾರ ಮುಖ್ಯಮಂತ್ರಿ ವೈ.ಎಸ್.ಜಗನ್‌ಮೋಹನ್ ರೆಡ್ಡಿ ಅವರಿಗೆ ರಾಜೀನಾಮೆ ನೀಡಿದ್ದಾರೆ.

ಸಚಿವ ಸಂಪುಟದ ಪುನರ್‌ರಚನೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಅಧಿವೇಶನ ಮುಂದೂಡಲು ಸಂಸದರೇ ಮನವಿ ಮಾಡಿದ್ದರು: ಪ್ರಹ್ಲಾದ್ ಜೋಶಿ

ಏಪ್ರಿಲ್ 11ರಂದು ಆಂಧ್ರಪ್ರದೇಶದ ಹೊಸ ಸಚಿವ ಸಂಪುಟ ರಚನೆ ಆಗಲಿದೆ. ಬುಧವಾರ ರಾತ್ರಿ ಜಗನ್‌ಮೋಹನ್ ರೆಡ್ಡಿ ರಾಜ್ಯಪಾಲ ಬಿಸ್ವ ಭೂಷಣ್ ಹರಿಚಂದನ್ ಅವರೊಂದಿಗೆ ಸಭೆ ನಡೆಸಿದ್ದು, ಸಚಿವ ಸಂಪುಟ ಪುನರ್‌ರಚನೆ ಕುರಿತು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹೊಸ 13 ಜಿಲ್ಲೆಗಳನ್ನು ಉದ್ಘಾಟಿಸಿದ ಜಗನ್

ಸೋಮವಾರ ಆಂಧ್ರಪ್ರದೇಶದಲ್ಲಿ ಹೊಸ ಆಡಳಿತಾತ್ಮಕ ನಕ್ಷೆಯನ್ನು ರಚಿಸಲಾಗಿದೆ. 13 ಹೊಸ ಜಿಲ್ಲೆಗಳೊಂದಿಗೆ ಆಂಧ್ರಪ್ರದೇಶದ ಒಟ್ಟು ಜಿಲ್ಲೆಗಳ ಸಂಖ್ಯೆ 26ಕ್ಕೆ ಹೆಚ್ಚಿಸಲಾಗಿದೆ.

Comments

Leave a Reply

Your email address will not be published. Required fields are marked *