ಕುರಾನ್ ಮೇಲೆ ದೇಶ ನಡೆಯಲ್ಲ, ತಂದೆಯ ಜೊತೆಗೆ ಮುಸ್ಕಾನ್‌ಳನ್ನು ಬಂಧಿಸಬೇಕು: ಮುತಾಲಿಕ್

ಬೆಳಗಾವಿ: ಅಲ್‌ಖೈದಾ ಜವಹರಿಗೆ ಭಾರತದಲ್ಲಿ ಮೂಗು ತೂರಿಸುವ ಅವಶ್ಯಕತೆ ಇಲ್ಲ. ನಮ್ಮ ದೇಶ ತಾಲಿಬಾನ್ ಅಲ್ಲ. ಕುರಾನ್ ಮೇಲೆ ನಮ್ಮ ದೇಶ ನಡೆಯಲ್ಲ. ಮುಸ್ಕಾನ್ ಹೊಗಳುವ ಅವಶ್ಯಕತೆ ಇಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಮುಸ್ಕಾನ್ ಹೊಗಳಿ ಅಲ್‌ಖೈದಾ ಮುಖ್ಯಸ್ಥ ವೀಡಿಯೋ ಬಿಡುಗಡೆ ಮಾಡಿದ ವಿಚಾರವಾಗಿ, ಸಿದ್ದರಾಮಯ್ಯ ಆರ್‌ಎಸ್‌ಎಸ್ ಮಾಡಿಸಿದ ವೀಡಿಯೋ ಎಂಬ ಹೇಳಿಕೆ ನೀಡಿದ್ದರು. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಪ್ರಮೋದ್ ಮುತಾಲಿಕ್, ಅಲ್‌ಖೈದಾ ಜವಹರಿ ಮುಸ್ಕಾನ್ ಹೊಗಳಿದ್ದು ಅತ್ಯಂತ ಖಂಡನೀಯವಾದದ್ದು. ಇದು ಅಷ್ಟು ಹಗುರವಾಗಿ ತೆಗೆದುಕೊಳ್ಳುವ ಹಾಗಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಗೋಮಾಂಸ ತಿನ್ನುವವರ ಜೊತೆ ಬೇಡ, ಹಿಂದೂಗಳು ಹಿಂದೂ ಡ್ರೈವರ್ ಜೊತೆ ದೇವಾಲಯಕ್ಕೆ ಹೋಗಲಿ: ಭಾರತ್ ರಕ್ಷಣ್ ವೇದಿಕೆ

ಅಲ್‌ಖೈದಾ ಸಂಘಟನೆಯನ್ನು ನಿಷೇಧ ಮಾಡಲಾಗಿದೆ. ಬ್ಯಾನ್ ಆದ ನಂತರ ಈ ವೀಡಿಯೋ ಎಲ್ಲಿಂದ ಬಂತು? ಹೇಗೆ ಬಂತು? ಕರ್ನಾಟಕದ ಮಂಡ್ಯ ಮೂಲದ ಮುಸ್ಕಾನ್‌ವರೆಗೂ ಹೇಗೆ ಬಂತು ಎನ್ನುವುದನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡು ವಿಚಾರಣೆ ನಡೆಸಬೇಕು. ಮುಸ್ಕಾನ್ ಹಾಗೂ ಆಕೆಯ ತಂದೆಯನ್ನು ಬಂಧಿಸಬೇಕು. ಅವರ ಮನೆಗೆ ಯಾರೆಲ್ಲಾ ಭೇಟಿ ಕೊಟ್ಟಿದ್ದಾರೆ ಎಂಬ ವಿಚಾರಣೆ ನಡೆಯಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಇಂಗ್ಲಿಷ್‌ಗೆ ಪರ್ಯಾಯವಾಗಿ ಹಿಂದಿ ಭಾಷೆ ಬಳಕೆಯಾಗಬೇಕು: ಅಮಿತ್ ಶಾ

ಮಹಾರಾಷ್ಟ್ರದ ಮುಸ್ಲಿಂ ಎಂಎಲ್‌ಎ ಬಂದು ಅವರಿಗೆ ಮೊಬೈಲ್ ಕೊಟ್ಟು ಹೋಗಿದ್ದಾರೆ. ಆ ಮೊಬೈಲ್ ಎಲ್ಲಿಂದ ಬಂತು ಎಂಬುದನ್ನು ತಿಳಿಯಬೇಕು. ತಕ್ಷಣ ಅದನ್ನು ಸೀಜ್ ಮಾಡಬೇಕು ಎಂದು ಹೇಳಿದರು.

Comments

Leave a Reply

Your email address will not be published. Required fields are marked *