ಪೊಲೀಸ್ ಕಮಿಷನರ್ ಹುದ್ದೆಗೆ ಸುಳ್ಳುಗಾರ ಎಂದು ಹೇಳುವ ನಡೆ ಸರಿಯಲ್ಲ: ಭಾಸ್ಕರ್ ರಾವ್

ಬೆಂಗಳೂರು: ಪೊಲೀಸ್ ಕಮಿಷನರ್ ಹುದ್ದೆಗೆ ಸುಳ್ಳುಗಾರ ಎಂದು ಹೇಳುವ ನಡೆ ಸರಿಯಲ್ಲ ಎಂದ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದು, ಬಿಜೆಪಿ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.

ಪೊಲೀಸ್ ಕಮಿಷನರ್ ಕಮಲ್ ಪಂಥ್ ಸುಳ್ಳು ಹೇಳಿದ್ದಾರೆ. ಚಂದ್ರು ಸ್ನೇಹಿತ ಸೈಮನ್ ರಾಜನ್ ಹೇಳಿರುವುದೇ ಸತ್ಯ. ಚಂದ್ರು ಮನೆಯವರು ಹೇಳಿರುವಂತೆ ಉರ್ದು ಕಾರಣಕ್ಕಾಗಿಯೇ ಚಂದ್ರು ಕೊಲೆ ಆಗಿರುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎಂದು ಆರೋಪಿಸಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಪೊಲೀಸ್ ಆಯುಕ್ತರು ಎಂದರೆ ಬೆಂಗಳೂರು 15 ಮಿಲಿಯನ್ ನಾಗರಿಕರನ್ನು ರಕ್ಷಿಸುವ ಸಂಸ್ಥೆಯಾಗಿದೆ. ಆಡಳಿತಾರೂಢ ರಾಜ್ಯ ಸರ್ಕಾರ ಮತ್ತು ಅಧಿಕಾರದಲ್ಲಿರುವ ಪಕ್ಷದ ರಾಜಕಾರಣಿಯೊಬ್ಬರು ಮಾಧ್ಯಮಗಳಲ್ಲಿ ಆಯುಕ್ತರನ್ನು ಸುಳ್ಳುಗಾರ ಎಂದು ಕರೆಯುವುದು ಮುಖ್ಯಮಂತ್ರಿ ಮತ್ತು ಸರ್ಕಾರವನ್ನು ಅವಮಾನಿಸುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪ್ರಧಾನಿ ತವರಲ್ಲೇ ಭೀಕರ ದುರಂತ – ಕೆಮಿಕಲ್ ಫ್ಯಾಕ್ಟರಿ ಸ್ಫೋಟಗೊಂಡು 6 ಮಂದಿ ಸಾವು

ಇತ್ತೀಚೆಗಷ್ಟೇ ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷವನ್ನು ಸೇರಿದ್ದಾರೆ. ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ಆಪ್ ಪಕ್ಷದ ಧ್ವಜ ಹಿಡಿದರು. ಇದನ್ನೂ ಓದಿ: ಮುಸ್ಕಾನ್‍ರನ್ನು ತನಿಖೆ ನಡೆಸುವಂತೆ ಸಿಎಂಗೆ ಅನಂತ್‍ಕುಮಾರ್ ಹೆಗ್ಡೆ ಪತ್ರ

Comments

Leave a Reply

Your email address will not be published. Required fields are marked *