ಖ್ಯಾತ ಯಕ್ಷಗಾನ ಭಾಗವತ ಬಲಿಪ ಪ್ರಸಾದ ನಿಧನ

ಮಂಗಳೂರು: ಖ್ಯಾತ ಯಕ್ಷಗಾನ ಭಾಗವತ ಬಲಿಪ ಪ್ರಸಾದ ಭಟ್‌(45) ನಿಧನರಾಗಿದ್ದಾರೆ.

ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಸಂಜೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಮಾರೂರು ನಿವಾಸಿಯಾಗಿದ್ದ ಬಲಿಪ ಪ್ರಸಾದ ಅವರು ಕಟೀಲು ಮೇಳದ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರ ಪುತ್ರರಾಗಿದ್ದಾರೆ. ಇದನ್ನೂ ಓದಿ: ನಾನು ಮಾತನಾಡಲ್ಲ, ನನ್ನ ಆಕ್ಷನ್ ಮಾತನಾಡುತ್ತದೆ: ವಿಪಕ್ಷಗಳಿಗೆ ಬೊಮ್ಮಾಯಿ ತಿರುಗೇಟು

ಕಟೀಲು ಎರಡನೇ ಮೇಳದ ಪ್ರಧಾನ ಭಾಗವತರಾಗಿದ್ದ ಇವರು ಅನಾರೋಗ್ಯ ಕಾರಣದಿಂದ ಈ ಬಾರಿಯ ತಿರುಗಾಟದಲ್ಲಿ ಇರಲಿಲ್ಲ. ತಂದೆ ಬಲಿಪ ಶೈಲಿಯ ಭಾಗವತಿಕೆ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದ ಇವರು ತಂದೆ, ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Comments

Leave a Reply

Your email address will not be published. Required fields are marked *