ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ಹುತಾತ್ಮ

ಹಾಸನ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧರೊಬ್ಬರು ಚಿಕಿತ್ಸೆ ಫಲಿಸದೆ ಹುತಾತ್ಮರಾದ ಘಟನೆ ಹಾಸನ ನಗರದಲ್ಲಿ ನಡೆದಿದೆ.

ಸಂಜಯ್ (22) ಮೃತ ಯೋಧ. ಸಂಜಯ್‌  ಕಾಶ್ಮೀರದಲ್ಲಿ ರಾಷ್ಟ್ರೀಯ ರೈಫಲ್ಸ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ರಜೆಯ ಮೇರೆಗೆ ಊರಿಗೆ ಬಂದಿದ್ದರು. ಹೊನ್ನೇನಹಳ್ಳಿ ಗ್ರಾಮದ ಸಂಜಯ್, ಹಾಸನದ ದಾಸರಕೊಪ್ಪಲಿನಲ್ಲಿ ನೆಲೆಸಿದ್ದರು. ಇದನ್ನೂ ಓದಿ: ಗಾಂಧಿನಗರ ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಲಕ್ಷ್ಮೀಕಾಂತ್ ನೇಮಕ

crime

ಮೂರು ದಿನಗಳ ಹಿಂದೆ ಹಾಸನದ ಎಂ.ಜಿ. ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಯೋಧ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಹುತಾತ್ಮರಾಗಿದ್ದಾರೆ. ಘಟನೆಯಿಂದ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬಿಎಸ್‍ಪಿಯನ್ನು ಮಾಯಾವತಿ ಬಿಜೆಪಿಗೆ ಮಾರಾಟ ಮಾಡಿದ್ದಾರೆ: ಭೀಮ್ ಆರ್ಮಿ ಮುಖ್ಯಸ್ಥ

Comments

Leave a Reply

Your email address will not be published. Required fields are marked *