ನಿನ್ನೆ ರಾತ್ರಿ ರಹಸ್ಯ ಸಭೆ- ಇಂದು ದಿಢೀರ್‌ ದೆಹಲಿಗೆ ಹೊರಟ ಸಿಎಂ

ಬೆಂಗಳೂರು: ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಪ್ರವಾಸ ಬೆಳಸಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ದಾವೋಸ್ ಪ್ರವಾಸಕ್ಕೂ ಮುನ್ನ ಬೊಮ್ಮಾಯಿ ಅವರು ದೆಹಲಿಗೆ ದಿಢೀರ್ ಭೇಟಿ ನೀಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ. ನಿನ್ನೆ ರಾತ್ರಿ ಸಚಿವರೊಬ್ಬರ ಮನೆಯಲ್ಲಿ ಸಿಎಂ ರಹಸ್ಯ ಸಭೆ ನಡೆಸಿದ್ದು, ಈ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಸಿ.ಸಿ.ಪಾಟೀಲ್, ಆರ್.ಅಶೋಕ್ ಭಾಗಿಯಾಗಿದ್ದರು. ಇದನ್ನೂ ಓದಿ: ಬಿಪಿಎಲ್ ಇರಲಿ ಯಾವುದೇ ಕಾರ್ಡ್ ಇದ್ರೂ ಸರ್ಕಾರ ಪರಿಹಾರ ಕೊಡ್ಬೇಕು: ಸಿದ್ದರಾಮಯ್ಯ

BASAVARAJ BOMMAI

ನಿನ್ನೆ ಸಿಟಿ ರೌಂಡ್ಸ್, ಬಿಬಿಎಂಪಿ ಸಭೆ, ಅಧಿಕಾರಿಗಳ ಸಭೆಯಲ್ಲಿ ಸಿಎಂ ಬೊಮ್ಮಾಯಿ ನಿರತರಾಗಿದ್ದರು. ಆದರೆ ರಾತ್ರಿ ಆಗುತ್ತಿದ್ದಂತೆ ಆಪ್ತರ ಜೊತೆ ಡಿನ್ನರ್ ಪಾಲಿಟಿಕ್ಸ್ ನಡೆಸಿದರಾ ಎಂಬ ಪ್ರಶ್ನೆ ಇದೀಗ ಮೂಡುತ್ತಿದೆ. ದೆಹಲಿಗೆ ದಿಢೀರ್ ಆಗಿ ಪ್ರವಾಸ ಬೆಳೆಸಿರುವುದರ ಉದ್ದೇಶ, ಸಂಪುಟ ಪುನಾರಚನೆ ಚರ್ಚೆಯೋ ಅಥವಾ ಪರಿಷತ್ ಅಭ್ಯರ್ಥಿಗಳ ಚರ್ಚೆಯೋ, ಮತ್ತೇನಾದರೋ ಎಂಬುದು ಇದೀಗ ಚರ್ಚೆ ಆಗುತ್ತಿದೆ. ಈ ನಡುವೆ ನಿನ್ನೆಯೇ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ದೆಹಲಿ ತಲುಪಿ ಇಲಾಖೆಯ ವಿವಿಧ ಕಾರ್ಯಗಳಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಮಳೆ ರೌಂಡ್ಸ್ ಬಿಟ್ಟು ಖಾಸಗಿ ಕಾರ್ಯಕ್ರಮಕ್ಕೆ ತೆರಳಿದ ಸಿಎಂ

Comments

Leave a Reply

Your email address will not be published. Required fields are marked *