ಇಂಟರ್‌ವ್ಯೂಗೆಂದು ಹೋದ ಯುವತಿ, ಟ್ಯಾಲಿಕ್ಲಾಸ್‌ಗೆ ಹೋಗ್ತೀನೆಂದಿದ್ದ ಯುವಕ – ಆತ್ಮಹತ್ಯೆಗೂ ಮುನ್ನ ನಡೆದಿದ್ದೇನು?

ಉಡುಪಿ: ಬೆಂಗಳೂರಿನ ಪ್ರೇಮಿಗಳಿಬ್ಬರು ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ನಡೆದಿದ್ದೇನು ಎನ್ನುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ.

ಕಳೆದ ಮೂರು ದಿನಗಳ ಹಿಂದೆಯೇ ಮಿಸ್ಸಿಂಗ್ ಕಂಪ್ಲೈಂಟ್‌ ದಾಖಲಾಗಿತ್ತು. ಯುವತಿ ತಾಯಿ ರತ್ನಮ್ಮ ಹಾಗೂ ಮೃತ ಯುವಕನ ತಂದೆ ವೆಂಕಟರಮನ್ ರಾವ್ ಅವರಿಂದ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕಾರೊಳಗೆ ಪೆಟ್ರೋಲ್ ಸುರಿದುಕೊಂಡು ಜೋಡಿ ಆತ್ಮಹತ್ಯೆ!

UDP

ಆತ್ಮಹತ್ಯೆಗೂ ಮುನ್ನ ನಡೆದಿದ್ದೇನು?: ಮೇ 19ರಂದು ಇಂಟರ್‌ವ್ಯೂಗೆ ಹೋಗುತ್ತೇನೆ ಎಂದು ಮೃತ ಯುವತಿ ಜ್ಯೋತಿ (23) ತೆರಳಿದ್ದರು. ಇತ್ತ ಟ್ಯಾಲಿ ಕ್ಲಾಸ್‌ಗೆ ಹೋಗುತ್ತೇನೆಂದಿದ್ದ ಮೃತ ಯುವಕ ಯಶವಂತ್ ತನ್ನ KA-04 JX- 0263 ಬೈಕ್‌ನಲ್ಲಿ ತೆರಳಿದ್ದನು. ಸಂಜೆಯಾದರೂ ಮನೆಗೆ ಬಾರದಿದ್ದರಿಂದ ಇಬ್ಬರೂ ಕಾಣೆಯಾಗಿರುವುದಾಗಿ ಪೋಷಕರು ಪ್ರತ್ಯೇಕವಾಗಿ ದೂರು ದಾಖಲಿಸಿದ್ದರು. ಇದನ್ನೂ ಓದಿ: ಹಿಮಾಚಲ ಉಪಸಭಾಧ್ಯಕ್ಷರಿಂದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಆರೋಪ

ಜ್ಯೋತಿ ಹಾಗೂ ಯಶವಂತ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ವಿಷಯ ಮನೆಯವರಿಗೂ ತಿಳಿದಿತ್ತು. ಎರಡೂ ಕುಟುಂಬದವರು ಇವರಿಬ್ಬರ ಮದುವೆ ನಿರಾಕರಿಸಿದ್ದರಿಂದ ಓಡಿ ಹೋಗಿ ಮದುವೆ ಆಗುವ ಪ್ಲಾನ್ ಮಾಡಿದ್ದರು. ಅಂದುಕೊಂಡಂತೆ ಮದುವೆಯೂ ಆಗಿತ್ತು. ಈ ಮದುವೆಯನ್ನು ಮನೆಯವರು ತಿರಸ್ಕರಿಸಿದರು. ಇದರಿಂದ ಮನನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಳ್ಳವುದಾಗಿ ತಮ್ಮ ಪೋಷಕರಿಗೆ ವಾಟ್ಸಾಪ್‌ನಲ್ಲಿ ಮೆಸೇಜ್ ಮಾಡಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ಮಂಗಳೂರಿಗೆ ತೆರಳಿದ್ದ ಈ ಜೋಡಿ ಹುಸೇನ್ ಎಂಬವರಿಂದ ಸ್ವಿಫ್ಟ್ ಕಾರು ಬಾಡಿಗೆ ಪಡೆದಿತ್ತು. ಇದೇ ಕಾರಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ.

Comments

Leave a Reply

Your email address will not be published. Required fields are marked *