ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ವೇಗೆ ಶಂಕು: ವಿಶೇಷ ಏನು?

ಚೆನ್ನೈ: ತಮ್ಮ ಸರ್ಕಾರಕ್ಕೆ ಎಂಟು ವರ್ಷ ತುಂಬಿದ ದಿನವೇ ಪ್ರಧಾನಿ ಮೋದಿ ದಕ್ಷಿಣ ದಂಡಯಾತ್ರೆ ನಡೆಸಿದ್ದಾರೆ. ಚೆನ್ನೈನಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಸೇರಿ 31ಸಾವಿರ ಕೋಟಿ ಮೊತ್ತದ 11 ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಎಕ್ಸ್‌ಪ್ರೆಸ್‌ವೇ ವಿಶೇಷ ಏನು?
ಭಾರತ್‍ಮಾಲಾ ಯೋಜನೆಯ ಅಡಿ 14,870 ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಪಥದ ರಸ್ತೆ ನಿರ್ಮಾಣವಾಗಲಿದೆ. ಸದ್ಯ 340 ಕಿ.ಮೀ ಉದ್ದ ಇರುವ ರಸ್ತೆ 262 ಕಿಲೋಮೀಟರ್‌ಗೆ ಇಳಿಕೆಯಾಗಲಿದೆ. ಮೂರು ರಾಜ್ಯಗಳ ಮೂಲಕ ಈ ರಸ್ತೆ ಹಾದು ಹೋಗಲಿದೆ.  ಇದನ್ನೂ ಓದಿ: ತೆಲಂಗಾಣದಲ್ಲಿ ಬಿಜೆಪಿ ಅಲೆ ಶುರುವಾಗಿದೆ : ಮೋದಿ

ಕರ್ನಾಟಕದಲ್ಲಿ 71 ಕಿ.ಮೀ, ಆಂಧ್ರದಲ್ಲಿ 85 ಕಿ.ಮೀ, ತಮಿಳುನಾಡಲ್ಲಿ 106 ಕಿ.ಮೀ ರಸ್ತೆ ನಿರ್ಮಾಣವಾಗಲಿದೆ. ಪ್ರಯಾಣದ ಅವಧಿ ಎರಡೂವರೆ ಗಂಟೆಗೆ ಇಳಿಕೆಯಾಗಲಿದ್ದು 2024ರ ಮಾರ್ಚ್‍ನಲ್ಲಿ ಯೋಜನೆ ಪೂರ್ಣಗೊಳಿಸುವ ಗುರಿಯನ್ನು ಹಾಕಲಾಗಿದೆ.

Comments

Leave a Reply

Your email address will not be published. Required fields are marked *