ಮುಂಬೈ: ಭಾರತ ನನ್ನದಲ್ಲ, ಠಾಕ್ರೆಯವರದ್ದಲ್ಲ, ಮೋದಿ – ಅಮಿತ್ ಶಾ ಅವರದ್ದಲ್ಲ, ಭಾರತ ದ್ರಾವಿಡರು ಮತ್ತು ಆದಿವಾಸಿಗಳದ್ದು ಎಂದು AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರದ ಭಿವಂಡಿಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ನನ್ನದಲ್ಲ, ಠಾಕ್ರೆಯವರದ್ದಲ್ಲ, ಮೋದಿ- ಅಮಿತ್ ಶಾ ಅವರದ್ದಲ್ಲ, ಭಾರತವು ಯಾರದ್ದು ಎಂದರೆ ಅದು ದ್ರಾವಿಡರು ಮತ್ತು ಆದಿವಾಸಿಗಳದ್ದು. ಆಫ್ರಿಕಾ, ಇರಾನ್, ಮಧ್ಯ ಏಷ್ಯಾ, ಪೂರ್ವ ಏಷ್ಯಾ ಭಾಗದಿಂದ ಜನರು ವಲಸೆ ಬಂದ ನಂತರ ಭಾರತ ರಚನೆಯಾಗಿದೆ. ಆದರೆ ದೇಶದಲ್ಲಿ ಮೊಘಲರ ನಂತರವೇ BJP – RSS ನವರು ಎಂದು ಕಿಡಿಕಾರಿದ್ದಾರೆ.

ಇದೇ ವೇಳೆ ಶಿವಸೇನಾ, ಎನ್ಸಿಪಿ ಹಾಗೂ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡ ಓವೈಸಿ, ಈ ಎಲ್ಲ ಪಕ್ಷಗಳು ಜಾತ್ಯಾತೀತ ಪಕ್ಷದ ನಾಯಕರು ಜೈಲಿಗೆ ಹೋಗಬಾರದು ಎಂದು ಭಾವಿಸುತ್ತಾರೆ. ಆದರೆ ಮುಸ್ಲಿಂ ನಾಯಕರು ಜೈಲಿಗೆ ಹೋದರೆ ಏಕೆ ಎಂದು ಪ್ರಶ್ನಿಸುವುದಿಲ್ಲ. ಅವರು ಜೈಲಿಗೆ ಹೋದರೂ ಪರ್ವಾಗಿಲ್ಲ ಎಂದು ಹೇಳುತ್ತಾರೆ ಎಂದು ಕಿಡಿ ಕಾರಿದರು.

3 ಪಕ್ಷಗಳಲ್ಲಿ ವಧು ಯಾರು?: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ, ಶಿವಸೇನೆಯನ್ನು ಸೋಲಿಸಲು ಒವೈಸಿಗೆ ಮತ ನೀಡುವಂತೆ ಎನ್ಸಿಪಿ ನಾಯಕರು ಕೇಳುತ್ತಿದ್ದರು. ಚುನಾವಣೆ ಮುಗಿದ ನಂತರ ಎನ್ಸಿಪಿ ಶಿವಸೇನೆಯೊಂದಿಗೆ ವಿವಾಹವಾಗಿದೆ. ಆದರೆ ಮೂರು ಪಕ್ಷಗಳಲ್ಲಿ ವಧು ಯಾರು ಎಂಬುದೇ ನನಗೆ ಗೊತ್ತಾಗುತ್ತಿಲ್ಲ ಎಂದು ಓವೈಸಿ ವ್ಯಂಗ್ಯವಾಡಿದ್ದಾರೆ.

Leave a Reply