ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದ ಯುವಕ ನೇಣಿಗೆ ಶರಣು

ಬೆಂಗಳೂರು: ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದು ಯವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಚಾಮುಂಡೇಶ್ವರಿ ಲೇಔಟ್‍ನಲ್ಲಿ ನಡೆದಿದೆ.

ಬೆಂಗಳೂರಿನ ವಿದ್ಯಾರಣ್ಯಪುರದ ಚಾಮುಂಡೇಶ್ವರಿ ಲೇಔಟ್‍ನಲ್ಲಿ ಚರಣ್(25) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ಐದು ವರ್ಷಗಳಿಂದ ಯುವತಿಯೊಬ್ಬಳ್ಳನ್ನು ಚರಣ್ ಪ್ರೀತಿಸುತ್ತಿದ್ದ. ಮದುವೆ ಮಾಡಿಕೊಳ್ಳುವ ನಿರ್ಧಾರ ಮಾಡಿ ಈ ಜೋಡಿ ಧರ್ಮಸ್ಥಳಕ್ಕೆ ಹೋಗಿದ್ದರು. ಇದನ್ನೂ ಓದಿ: ಬೆಸ್ಕಾಂ ವಾಟ್ಸಾಪ್ ಸಹಾಯವಾಣಿಗೆ ಗ್ರಾಹಕರಿಂದ ಭರ್ಜರಿ ರೆಸ್ಪಾನ್ಸ್

POLICE JEEP

ಆದರೆ ಕೊನೆ ಕ್ಷಣದಲ್ಲಿ ಯುವತಿ ಮದುವೆ ಆಗೋಕೆ ನಿರಾಕರಿಸಿದ್ದಾಳೆ. ಇದರಿಂದ ಮನನೊಂದ ಚರಣ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ. ಈ ಕುರಿತು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವಿಶ್ವಾಸ ಮತದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್

Comments

Leave a Reply

Your email address will not be published. Required fields are marked *