ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಮಾರಣಾಂತಿಕ ಹಲ್ಲೆ – ಸಾರ್ವಜನಿಕರಿಂದ ಪಾಗಲ್ ಪ್ರೇಮಿಗೆ ಬಿತ್ತು ಧರ್ಮದೇಟು

ಮಂಡ್ಯ: ಪ್ರೀತಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪಾಗಲ್ ಪ್ರೇಮಿಗೆ ಸಾರ್ವಜನಿಕರು ಧರ್ಮದೇಟು ಕೊಟ್ಟ ಘಟನೆ ಮಂಡ್ಯ ಮೆಡಿಕಲ್ ಕಾಲೇಜ್ ಆವರಣದಲ್ಲಿ ನಡೆದಿದೆ.

ಪ್ಯಾರಾ ಮೆಡಿಕಲ್ ಓದುತ್ತಿದ್ದ ವೈ.ಯರಹಳ್ಳಿ ಗ್ರಾಮದ 20 ವರ್ಷದ ಯುವತಿ ಮೇಲೆ ಹಲ್ಲೆ ಮಾಡಿದ್ದ, ಅದೇ ಗ್ರಾಮದ ಸಂಪತ್ ಕುಮಾರ್‌ಗೆ ಜನ ಥಳಿಸಿದ್ದಾರೆ. ಎರಡು ವರ್ಷಗಳಿಂದ ಇಬ್ಬರೂ ಪ್ರೀತಿಸುತ್ತಿದ್ದರು. ಆದರೆ, ಪ್ರೀತಿ, ಪ್ರೇಮ ಬಿಟ್ಟು ಓದಿನ ಕಡೆ ಗಮನಕೊಡಿ ಅಂತ ಇಬ್ಬರಿಗೂ ಯುವತಿ ತಂದೆ ಬುದ್ದಿ ಹೇಳಿದ್ದರು. ಬಳಿಕ ಸಂಪತ್‍ನಿಂದ ಯುವತಿ ಅಂತರ ಕಾಯ್ದುಕೊಂಡಿದ್ದಳು. ಆದರೆ, ಸಂಪತ್ ಮಾತ್ರ ಪ್ರೀತಿ ಮಾಡುವಂತೆಯೇ ಪೀಡಿಸುತ್ತಿದ್ದನು. ಇದನ್ನೂ ಓದಿ: ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ – ಬಿಎಸ್‍ವೈ ಆಪ್ತ ಎದುರೇ ಕಲ್ಲುತೂರಾಟ

ಮೊನ್ನೆ ಸ್ನೇಹಿತರ ಜೊತೆ ಯುವತಿ ಬರ್ತ್‍ಡೇ ಆಚರಿಸಿಕೊಂಡಿದ್ದ ಸುದ್ದಿ ತಿಳಿದ ಸಂಪತ್ ಮನೆಗೆ ಹೋಗಿ ಗಲಾಟೆ ಮಾಡಿದ್ದಾನೆ. ಗುರುವಾರ ಬೆಳಗ್ಗೆಯಿಂದಲೂ ಕಾಲೇಜು ಬಳಿಯೇ ಹೊಂಚು ಹಾಕಿದ್ದ ಸಂಪತ್, ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್‍ನಲ್ಲಿ ಬಂದು ಕಾಲೇಜಿನಿಂದ ಹೊರಗೆ ಬರುತ್ತಿದ್ದಂತೆ ಯುವತಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ. ತಕ್ಷಣವೇ ಸಂಪತ್‍ಗೆ ಹಿಡಿದ ಜನ ಧರ್ಮದೇಟು ಕೊಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದೀಗ ಯುವತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಬಿಜೆಪಿ ಪ್ಲ್ಯಾನ್‌ ಏನು?

Comments

Leave a Reply

Your email address will not be published. Required fields are marked *