ಕಾಂಗ್ರೆಸ್‌ನಲ್ಲಿ ಈಗ ಎಲ್ಲರೂ ಸಿಎಂ ಅಭ್ಯರ್ಥಿಗಳೇ: ಬಿಜೆಪಿ ವ್ಯಂಗ್ಯ

bjP

ಬೆಂಗಳೂರು: ಕಾಂಗ್ರೆಸ್ಸಿನಲ್ಲಿ ಈಗ ಎಲ್ಲರೂ ಸಿಎಂ ಅಭ್ಯರ್ಥಿಗಳೇ ಎಂದು ಬಿಜೆಪಿ ಟ್ವೀಟ್ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲೆಳೆದಿದೆ.

ಟ್ವೀಟ್‍ನಲ್ಲಿ ಏನಿದೆ?:
ಜಗತ್ತಿನ ಕಣ್ಣಿಗೆ ಮಣ್ಣೆರೆಚಲು ಡಿಕೆಶಿ ಮತ್ತು ಸಿದ್ದರಾಮಯ್ಯ ಒಂದೇ ಕಾರಿನಲ್ಲಿ ಬರುವುದೇನು, ಜೊತೆಯಾಗಿ ಎತ್ತಿನಗಾಡಿ ಓಡಿಸುವುದೇನು, ಚಿಂತನ ಶಿಬಿರದಲ್ಲಿ ಫೋಟೋಗೆ ಪೋಸ್ ಕೊಟ್ಟಿದ್ದೇನು, ಮುಖವಾಡ ಕಳಚುತ್ತಿದೆ. ಸೃಷ್ಟಿಯಾದ ಕಂದಕ ಲೋಕಕ್ಕೆ ಸಾರಿ ಸಾರಿ ಹೇಳುತ್ತಿದೆ. ಇದು ಸಿದ್ದರಾಮಯ್ಯ v/s ಡಿಕೆಶಿ ಕದನವೆಂದು.

ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಏಕಾಂಗಿತನ ಕಾಡುತ್ತಿದೆ. ಕಾಂಗ್ರೆಸ್ಸಿನಲ್ಲಿ ಈಗ ಎಲ್ಲರೂ ಸಿಎಂ ಅಭ್ಯರ್ಥಿಗಳೇ. ಡಿಕೆಶಿ ಅವರಿಂದ ಸಿಎಂ ಸ್ಥಾನಕ್ಕೆ ಪ್ರಬಲ ಲಾಬಿ ಎದುರಾಗುತ್ತಿದೆ. ಸಿದ್ದರಾಮಯ್ಯ v/s ಡಿಕೆಶಿ ಕಲಹ ಈಗ ಬೇರೆಯೇ ಹಂತ ತಲುಪುತ್ತಿದೆ. ಸಿದ್ದರಾಮಯ್ಯ ವಿರೋಧಿ ಪಾಳಯ ಜಾಗೃತಗೊಂಡಿದೆ. ಕಾಂಗ್ರೆಸ್ ಪಕ್ಷದಲ್ಲಿ ಡಿಕೆಶಿ ವರ್ಚಸ್ಸು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದನ್ನೂ ಓದಿ: ಮಳೆ ಬಂದ್ರೆ ನೆಂದು ಹೋಗ್ತೇವೆ, ಸರಿಯಾದ ಶಾಲಾ ಕೊಠಡಿ ಕಟ್ಟಿಸಿಕೊಡಿ: ವಿದ್ಯಾರ್ಥಿಗಳ ಮನವಿ

ಡಿಕೆಶಿ ವರ್ಚಸ್ಸಿನ ಪ್ರಭಾವಲಯವನ್ನು ತಗ್ಗಿಸಲು ಸಿದ್ದರಾಮಯ್ಯ ಹೆಣಗಾಡುತ್ತಿದ್ದಾರೆ. ಇದಕ್ಕಾಗಿ ಶಕ್ತಿ ಪ್ರದರ್ಶನ ಸಮಾರಂಭದ ಸಿದ್ಧತೆ ಆರಂಭವಾಗಿದೆ. ಅಭಿಮಾನಿ ಬಳಗದ ಈ ಸಮಾರಂಭ ಯಾರಿಗೆ ಠಕ್ಕರ್ ನೀಡಲು ಆಯೋಜಿಸಲಾಗಿದೆ? ಕೈ ನಾಯಕರು ಪದೇ ಪದೇ ದೆಹಲಿಯ 10 ಜನ್‍ಪಥ್ ದರ್ಶನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಹೊತ್ತಿಕೊಂಡ ಕಿಡಿಯನ್ನು ನಕಲಿ ಗಾಂಧಿ ಕುಟುಂಬಕ್ಕೂ ಬಗೆಹರಿಸಲು ಸಾಧ್ಯವಾಗುತ್ತಿಲ್ಲ. ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಕಗ್ಗಂಟನ್ನು ಬಗೆಹರಿಸಲಾಗದವರು ರಾಜ್ಯದ ಸಿಎಂ ಕುರ್ಚಿಯ ಕಾದಾಟವನ್ನು ಬಗೆಹರಿಸುವರೇ ಎಂದು ವ್ಯಂಗ್ಯವಾಡಿದೆ. ಇದನ್ನೂ ಓದಿ: ಪಾಕಿಸ್ತಾನದ ರಾಯಭಾರಿ ಕಚೇರಿಗಳ ಟ್ವಿಟ್ಟರ್ ಖಾತೆಗಳನ್ನು ನಿಷೇಧಿಸಿದ ಭಾರತ

Live Tv

Comments

Leave a Reply

Your email address will not be published. Required fields are marked *