ಮೂಲ ಕಾಂಗ್ರೆಸ್ಸಿಗರಿಗೆ ಚಾಕರಿ ಮಾಡುವ ಸುಯೋಗ ಸಿದ್ದರಾಮಯ್ಯಗೆ ಬಂದಿದೆ – ಕಾಲೆಳೆದ ಬಿಜೆಪಿ

ಬೆಂಗಳೂರು: ಸಿದ್ದರಾಮೋತ್ಸವದ ವಿಚಾರವಾಗಿ ಕಾಂಗ್ರೆಸ್ಸಿನಲ್ಲೇ ಪ್ರಮುಖ ನಾಯಕರ ನಡುವೆ ಭಿನ್ನಮತ ಸ್ಫೋಟಗೊಂಡಿದೆ. ಕೆಲವರು ಸಿದ್ದರಾಮೋತ್ಸವಕ್ಕೆ ಬೆಂಬಲಿಸಿದರೆ ಇನ್ನೂ ಕೆಲವರು ನಾಮಕಾವಸ್ಥೆಗೆ ಬೆಂಬಲಿಸಿ, ಪರೋಕ್ಷವಾಗಿ ಚಾಟಿ ಬೀಸುತ್ತಿದ್ದಾರೆ. ಈ ನಡುವೆ ಆಗಾಗ್ಗೆ ಬಿಜೆಪಿ ಕಾಲೆಳೆಯುವ ಕೆಲಸ ಮಾಡುತ್ತಿದೆ.

ಟ್ವೀಟ್‌ನಲ್ಲಿ ಏನಿದೆ?
ಸಿದ್ದರಾಮೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಬಿಜೆಪಿ, ಮೂಲ ಕಾಂಗ್ರೆಸಿಗರಿಗೆ ಸಿದ್ದರಾಮಯ್ಯ ಚಾಕರಿ ಮಾಡುವ ಸುಯೋಗ ಬಂದಿದೆ. ಮುಖ್ಯಮಂತ್ರಿ ಸ್ಥಾನದ ಕನಸು ಕಾಣುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೋರ್ವ ಸಿಎಂ ಕುರ್ಚಿಯ ಕನಸುಗಾರನಾಗಿದ್ದಾರೆ. ಶೀಘ್ರದಲ್ಲೇ ಕಾಂಗ್ರೆಸ್ `ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಅಲೆಗಳ ಹೊಡೆತಕ್ಕೆ ಕೊಚ್ಚಿಕೊಂಡು ಹೋದ ರಸ್ತೆ!

ಈಗಾಗಲೇ ಸಿದ್ದರಾಮೋತ್ಸವದ ಬಗ್ಗೆ ಕಾಂಗ್ರೆಸ್‌ನಲ್ಲಿ ಅಸಹನೆ, ಅಸಹಿಷ್ಣುತೆಯ ಅಲೆ ಜೋರಾಗಿಯೇ ಬೀಸುತ್ತಿದೆ. ಕಾಂಗ್ರೆಸ್‌ನಲ್ಲೀಗ ವಲಸಿಗ ಸಿದ್ದರಾಮಯ್ಯ ಆರಾಧನೆ ನಡೆಯುತ್ತಿದೆ. ಮೂಲ ಕಾಂಗ್ರೆಸಿಗರು ಮೂಕಪ್ರೇಕ್ಷಕರಾಗಿದ್ದಾರೆ. ಸಿದ್ದರಾಮಯ್ಯ ಅವರ ಬಗ್ಗೆ ಇರುವ ಅಸಮಾಧಾನವನ್ನು ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಸಹ ಹೊರ ಹಾಕಿದ್ದಾರೆ. ಅಧಿಕಾರದಾಹಿ ಸಿದ್ದರಾಮಯ್ಯ ವಿರುದ್ಧ ಸಹನೆಯ ಕಟ್ಟೆ ಒಡೆದಿದೆ. ಎಷ್ಟೆಂದರೂ ಹರಿಪ್ರಸಾದ್ ಮೂಲ ಕಾಂಗ್ರೆಸ್ಸಿಗ, ವಲಸಿಗ ಸಿದ್ದರಾಮಯ್ಯ ಅವರನ್ನು ಎಷ್ಟು ವರ್ಷಗಳ ಕಾಲ ಸಹಿಸಿಕೊಳ್ಳಲು ಸಾಧ್ಯ? ಎಂದು ಟ್ವೀಟ್‌ನಲ್ಲೇ ಟಾಂಗ್‌ಕೊಟ್ಟಿದೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *