ಶಾರ್ಟ್‌ಕಟ್‌ ರಾಜಕೀಯದ ಮೂಲಕ ಮತಗಳನ್ನು ಸೆಳೆಯುವುದು ತುಂಬಾ ಸುಲಭ: ಪ್ರಧಾನಿ ಮೋದಿ

ರಾಂಚಿ: ಶಾರ್ಟ್‌ಕಟ್‌ ರಾಜಕೀಯವೆಂಬುದು ದೊಡ್ಡ ಸವಾಲಾಗಿದೆ. ಶಾರ್ಟ್ಕಟ್ ಮೂಲಕ ಮತಗಳನ್ನು ಸೆಳೆಯುವುದು ತುಂಬಾ ಸುಲಭ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜಾರ್ಖಂಡ್‌ನ ದೇವಘರ್‌ನಲ್ಲಿ ನಡೆದ ಬಿಜೆಪಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, `ಶಾರ್ಟ್‌ಕಟ್‌’ ರಾಜಕೀಯದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬುಮ್ರಾ ಬೌಲಿಂಗ್‌ ದಾಳಿಗೆ ತತ್ತರಿಸಿದ ಆಂಗ್ಲರು – ಭಾರತಕ್ಕೆ 10 ವಿಕೆಟ್‌ಗಳ ಭರ್ಜರಿ ಜಯ

ಶಾರ್ಟ್‌ಕಟ್‌ ರಾಜಕೀಯವೇ ದೊಡ್ಡ ಸವಾಲಾಗಿದೆ. ಶಾರ್ಟ್‌ಕಟ್‌ಗಳ ಮೂಲಕ ಮತಗಳನ್ನು ಸೆಳೆಯುವುದು ತುಂಬಾ ಸುಲಭ. ಆದರೆ ಒಂದು ದೇಶವು ಶಾರ್ಟ್‌ಕಟ್‌ ರಾಜಕೀಯ ಅವಲಂಬಿಸಿದರೆ ಅದು ಶಾರ್ಟ್ ಸರ್ಕ್ಯೂಟ್‌ಗೆ ಕಾರಣವಾಗುತ್ತದೆ. ನಾವು ಅದರಿಂದ ದೂರವಿರಬೇಕು ಎಂದು ಎಚ್ಚರಿಸಿದ್ದಾರೆ.

ನಂತರ ಪ್ರಧಾನಿ ನರೇಂದ್ರ ಮೋದಿ ಅವರು 16,800 ಕೋಟಿಗೂ ಅಧಿಕ ಮೊತ್ತದ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಇದನ್ನೂ ಓದಿ: PSI ಹಗರಣದ ಹಿಂದೆ ಬೊಮ್ಮಾಯಿ, ಗೃಹಸಚಿವರಿದ್ದಾರೆ – ಸರ್ಕಾರದ ಕುಮ್ಮಕ್ಕಿಲ್ಲದೇ ಇದೆಲ್ಲಾ ಸಾಧ್ಯವೇ ಎಂದ ಸಿದ್ದರಾಮಯ್ಯ

ಇದಕ್ಕೂ ಮುನ್ನ ದೇಶದ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಬಾಬಾ ಬೈದ್ಯನಾಥ ದೇವಾಲಯದಲ್ಲಿ ವೇದ ಮಂತ್ರಗಳ ಪಠಣಗಳ ನಡುವೆ ಪ್ರಧಾನಿ ಮೋದಿ ಪ್ರಾರ್ಥನೆ ಸಲ್ಲಿಸಿದರು. ಪ್ರಧಾನಿ ಭೇಟಿಗಾಗಿ ದೇವಾಲಯವನ್ನು ದೀಪಗಳು ಮತ್ತು ಹೂವುಗಳಿಂದ ಅಲಂಕರಿಸಲಾಗಿತ್ತು. ದೇಗುಲದ ವಿಐಪಿ ಬಾಗಿಲು ತಲುಪಿದ ತಕ್ಷಣ 11 ಪುರೋಹಿತರ ಗುಂಪಿನಿಂದ ಶಂಖನಾದದ ನಡುವೆ ಪ್ರಧಾನಿ ಅವರನ್ನು ಸ್ವಾಗತಿಸಲಾಯಿತು.

ಜಾರ್ಖಂಡ್ ರಾಜಧಾನಿಯಿಂದ ಸುಮಾರು 720 ಕಿಮೀ ದೂರದಲ್ಲಿರುವ ಈ ದೇವಾಲಯವು ಜುಲೈ 14 ರಂದು ಪ್ರಾರಂಭವಾಗುವ ಶ್ರಾವಣಿ ಮೇಳದ ಸಂದರ್ಭದಲ್ಲಿ ಪ್ರತಿವರ್ಷ ಸಾವಿರಾರು ಯಾತ್ರಿಕರನ್ನು ಆಕರ್ಷಿಸುತ್ತದೆ ಎಂದು ಹೇಳಲಾಗುತ್ತದೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *