ದುಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ಏಕ್ಸ್‌ಪ್ರೆಸ್‍ನಲ್ಲಿ ಸುಟ್ಟ ವಾಸನೆ- ಮಸ್ಕತ್‍ಗೆ ಹೋದ ವಿಮಾನ

ನವದೆಹಲಿ: ಕ್ಯಾಲಿಕಟ್‍ನಿಂದ ದುಬೈಗೆ ಹೋಗುತ್ತಿದ್ದ ಏರ್ ಇಂಡಿಯಾ ಏಕ್ಸ್‌ಪ್ರೆಸ್ ವಿಮಾನವನ್ನು ತಾಂತ್ರಿಕ ದೋಷದಿಂದಾಗಿ ಮಸ್ಕತ್‍ಗೆ ತಿರುಗಿಸಲಾಗಿದೆ.

ಕ್ರೂಸ್ ಸಮಯದಲ್ಲಿ ಫಾರ್ವರ್ಡ್ ಗ್ಯಾಲಿಯಲ್ಲಿ ಸುಟ್ಟಿರುವ ವಾಸನೆ ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ಬೇರೆಡೆಗೆ ಸಾಗಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ. ಭಾರತಕ್ಕೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳು ಎದುರಿಸುತ್ತಿರುವ ತಾಂತ್ರಿಕ ದೋಷದ ಅನೇಕ ಘಟನೆಗಳಲ್ಲಿ ಇದೂ ಒಂದಾಗಿದೆ.

3 ವಿಮಾನಗಳು ತುರ್ತು ಭೂಸ್ಪರ್ಶ: ಕಳೆದ 24 ಗಂಟೆಗಳಲ್ಲಿ ಭಾರತದ ವಿವಿಧ ವಿಮಾನನಿಲ್ದಾಣಗಳಲ್ಲಿ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳ 3 ವಿಮಾನಗಳು ತುರ್ತು ಭೂಸ್ಪರ್ಶ ಮಾಡಿವೆ. ಶುಕ್ರವಾರ ಮತ್ತು ಶನಿವಾರದಂದು ಕ್ಯಾಲಿಕಟ್, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಈ ಲ್ಯಾಂಡಿಂಗ್‍ಗಳನ್ನು ಮಾಡಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವಿವಿಧ ತಾಂತ್ರಿಕ ಸಮಸ್ಯೆಗಳಿಂದಾಗಿ ಎಲ್ಲಾ ತುರ್ತು ಲ್ಯಾಂಡಿಂಗ್‍ಗಳಾಗಿವೆ. ಏರ್ ಅರೇಬಿಯಾ ವಿಮಾನವು ಶಾರ್ಜಾದಿಂದ ಕೊಚ್ಚಿನ್‍ಗೆ ಹೋಗುತ್ತಿತ್ತು. ಈ ಸಂದರ್ಭದಲ್ಲಿ ಹೈಡ್ರಾಲಿಕ್ ವೈಫಲ್ಯದಿಂದಾಗಿ ಕೊಲ್ಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು.

ಇನ್ನೊಂದು ಘಟನೆಯಲ್ಲಿ, ನಿನ್ನೆ ಅಡಿಸ್ ಅಬಾಬಾದಿಂದ ಬ್ಯಾಂಕಾಕ್‍ಗೆ ತೆರಳುತ್ತಿದ್ದ ಇಥಿಯೋಪಿಯನ್ ಏರ್‌ ಲೈನ್ಸ್‌ನ ವಿಮಾನವು ಒತ್ತಡದ ಸಮಸ್ಯೆಯಿಂದಾಗಿ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು. ಇದೇ ರೀತಿಯ ಮೂರನೇ ಘಟನೆಯಲ್ಲಿ, ಜುಲೈ 15ರಂದು, ಶ್ರೀಲಂಕನ್ ಏರ್‌ಲೈನ್ಸ್‌ನ ವಿಮಾನವು ಹೈಡ್ರಾಲಿಕ್ ಸಮಸ್ಯೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು. ಇದನ್ನೂ ಓದಿ: ಹೈದರಾಬಾದ್‍ಗೆ ಬರುತ್ತಿದ್ದ ಇಂಡಿಗೋ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಎಲ್ಲಾ ಘಟನೆಗಳ ಬಗ್ಗೆ ವಿವರವಾದ ತನಿಖೆಗೆ ಆದೇಶಿಸಿದೆ. ಇದನ್ನೂ ಓದಿ: ಸೇನಾ ಹೆಲಿಕಾಪ್ಟರ್‌ಗಳನ್ನು ಅಭಿವೃದ್ಧಿಪಡಿಸಲು ಖಾಸಗಿ ಕಂಪನಿಗಳಿಗೆ ರಕ್ಷಣಾ ಸಚಿವಾಲಯದಿಂದ ಅನುಮತಿ

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *