ಬಸ್‍ಗಳ ನಡುವೆ ಭೀಕರ ಅಪಘಾತ – 8 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ನೋ: ಬಸ್‍ಗಳ ನಡುವೆ ನಡೆದ ಭೀಕರ ಅಪಘಾತಕ್ಕೆ 8 ಮಂದಿ ಸಾವನ್ನಪ್ಪಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್‌ ವೇನಲ್ಲಿ ಚಲಿಸುತ್ತಿದ್ದ ಬಸ್‍ಗಳು ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ತಲುಪುತಿದ್ದಂತೆ ಅಪಘಾತ ಸಂಭವಿಸಿದೆ. ಎರಡೂ ಬಸ್‍ಗಳು ಬಿಹಾರದ ಸೀತಾಮರ್ಹಿ ಮತ್ತು ಸುಪೌಲ್‍ನಿಂದ ದೆಹಲಿಗೆ ಹೋಗುತ್ತಿದ್ದವು. ಬಸ್‍ಗಳ ನಡುವಿನ ಡಿಕ್ಕಿಯ ರಭಸಕ್ಕೆ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 3 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್‍ಗಳೆರಡು ಸಂಪೂರ್ಣ ಜಖಂ ಗೊಂಡಿದೆ. ಇದನ್ನೂ ಓದಿ: ನಾಯಿಗಳ ಹಾವಳಿಗೆ ಬೆಚ್ಚಿ ಬಿದ್ದ ಕುಂದಾನಗರಿ ಜನ – ಆರು ತಿಂಗಳಲ್ಲಿ 14 ಸಾವಿರ ಮಂದಿಗೆ ನಾಯಿ ಕಡಿತ

ಲೋನಿ ಕತ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಅಪಘಾತ ಸಂಭವಿಸಿದ್ದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: ಗಾಂಜಾ ಸಾಗಾಟ ಎಂದು ತನಿಖೆ ಮಾಡಿದ ಪೊಲೀಸರಿಗೆ ತಿಳಿಯಿತು ಕೊಲೆ ರಹಸ್ಯ

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *