ದೊಣ್ಣೆಯಿಂದ ಹೊಡೆದು ಮಹಿಳೆಯ ಬರ್ಬರ ಹತ್ಯೆ

ಬೆಂಗಳೂರು/ಆನೇಕಲ್: ದೊಣ್ಣೆಯಿಂದ ಹೊಡೆದು ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಲಕ್ಷ್ಮಿಸಾಗರದಲ್ಲಿ ನಡೆದಿದೆ.

ತಮಿಳುನಾಡಿನ ಡೆಂಕಣಿಕೋಟೆ ಮೂಲದ ಮಾದಮ್ಮ ಕೊಲೆಯಾದ ಮಹಿಳೆ. ಕಳೆದ ಕೆಲ ವರ್ಷಗಳ ಹಿಂದೆ ಪತಿ ತೀರಿಕೊಂಡ ಹಿನ್ನೆಲೆ ಮಾದಮ್ಮ ತಮಿಳುನಾಡಿನಿಂದ ಆನೇಕಲ್ ತಾಲೂಕಿನ ಲಕ್ಷ್ಮಿಸಾಗರ ಗ್ರಾಮಕ್ಕೆ ಬಂದು ಕಟ್ಟಡ ನಿರ್ಮಾಣದ ಕೆಲಸ ಮಾಡಿಕೊಂಡಿದ್ದರು. ಈ ವೇಳೆ ಮಣಿ ಎಂಬಾತನ ಪರಿಚಯವಾಗಿ ಪರಿಚಯ ಅನೈತಿಕ ಸಂಬಂಧಕ್ಕೆ ತಿರುಗಿದ್ದು, ಒಂದೇ ಮನೆಯಲ್ಲಿ ವಾಸ ಮಾಡುತ್ತಿದ್ದರು. ಇದನ್ನೂ ಓದಿ: ಅಕ್ರಮ ಸಂಬಂಧ ಹೊಂದುವಂತೆ ಪತ್ನಿಗೆ ಬ್ಲಾಕ್‍ಮೇಲ್ – ಪೊಲೀಸಪ್ಪನ ಮೂಗು, ಕಿವಿ, ತುಟಿ ಕಟ್

 

ಪ್ರತಿದಿನ ಇಬ್ಬರು ಕಟ್ಟಡ ನಿರ್ಮಾಣ ಕೆಲಸಕ್ಕೆ ಹೋಗಿ ಬಂದು ಸಂಜೆ ವೇಳೆಯಲ್ಲಿ ಮದ್ಯ ಸೇವನೆ ಮಾಡುತ್ತಿದ್ದರು. ಅದೇ ರೀತಿ ಇಂದು ಸಹ ಮದ್ಯ ಸೇವನೆ ಮಾಡುವಾಗ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಅಲ್ಲಿಯೇ ಇದ್ದ ದೊಣ್ಣೆಯಿಂದ ಮಾದಮ್ಮನ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆಗೈದು ಆರೋಪಿ ಮಣಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ- ಇಂದು ಡಿಕೆಶಿ ಜಾಮೀನು ಅರ್ಜಿಯ ತೀರ್ಪು ಪ್ರಕಟ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಆನೇಕಲ್ ಉಪವಿಭಾಗದ ಡಿವೈಎಸ್‍ಪಿ ಮಲ್ಲೇಶ್ ಹಾಗೂ ಸೂರ್ಯನಗರ ಪೊಲೀಸ್ ಇನ್ಸ್​ಪೆಕ್ಟರ್ ರಾಘವೇಂದ್ರ ಗೌಡ ಸ್ಥಳ ಪರಿಶೀಲನೆ ನಡೆಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಣಿಗಾಗಿ ಬಲೆ ಬೀಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *