HDK ಬೆಂಗಾವಲು ವಾಹನ ಅಪಘಾತ – ಮೂವರಿಗೆ ಗಂಭೀರ ಗಾಯ

ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ತಿಪ್ಪೂರು ಗೇಟ್ ಬಳಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ.

ನಿನ್ನೆ ತಡರಾತ್ರಿ ಒಂದು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮೂವರು ಗಂಭೀರ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಅಲ್‌ಖೈದಾ ಮುಖ್ಯಸ್ಥನ ಹತ್ಯೆ – ಅಮೆರಿಕದ ಡ್ರೋನ್‌ ದಾಳಿ ಖಂಡಿಸಿದ ತಾಲಿಬಾನ್‌

ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಎಸ್ಕಾರ್ಟ್ ವಾಹನ ನಿನ್ನೆ ತಡರಾತ್ರಿ ಅಪಘಾತಕ್ಕೀಡಾಗಿದ್ದು, ವಾಹನದಲ್ಲಿದ್ದ ಐವರು ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಎಸ್ಕಾರ್ಟ್ ಸಿಬ್ಬಂದಿಯಾದ ಮಹೇಶ್, ಮಂಜುನಾಥ್ ಹಾಗೂ ಆನಂದ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ವಾಹನ ಅಪಘಾತಕ್ಕೆ ಸ್ಪಷ್ಟ ಕಾರಣವೆನೆಂಬುದು ತಿಳಿದುಬಂದಿಲ್ಲ. ಇದನ್ನೂ ಓದಿ: ಹಿಜಬ್ ನಿಷೇಧದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ವಿಳಂಬ: ಸಿಜೆಐ

ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅಮೃತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *