ಸಿದ್ದರಾಮಯ್ಯ ಅವಧಿಯಲ್ಲಿ ಶಿಕ್ಷಕರ ನೇಮಕಾತಿ ಅಕ್ರಮ ಆರೋಪ – 11 ಜನರ ಬಂಧನ

ತುಮಕೂರು/ವಿಜಯಪುರ: ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಕಾಲದಲ್ಲಿ ಶಿಕ್ಷಕರ ನೇಮಕಾತಿ ಅಕ್ರಮ ಆಗಿರುವ ಆರೋಪದಲ್ಲಿ ಇದೀಗ ಸಿಐಡಿ ಅಧಿಕಾರಿಗಳು 11 ಜನರನ್ನು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ 10 ಜನ ಹಾಗೂ ವಿಜಯಪುರದ ಒಬ್ಬ ಶಿಕ್ಷಕನನ್ನು ಬಂಧಿಸಲಾಗಿದ್ದು, ಅವರನ್ನು ಬುಧವಾರ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

Siddaramaiah (2)

ಆರೋಪಿಗಳಲ್ಲಿ ತುಮಕೂರಿನ 10 ಜನ ಹಾಗೂ ವಿಜಯಪುರದ ಓರ್ವ ಶಿಕ್ಷಕ ಸಿಐಡಿ ಅಧಿಕಾರಿಗಳ ಕೈಯಲ್ಲಿ ಸೆರೆಯಾಗಿದ್ದಾರೆ. ಶಮೀನಾಜ್, ರಾಜೇಶ್ವರಿ ಜಗ್ಲಿ, ಕಮಲಾ, ನಾಗರತ್ನ, ದಿನೇಶ್, ನವೀನ್ ಹನುಮಗೌಡ, ನವೀನ್ ಕುಮಾರ್, ದೇವೇಂದ್ರ ನಾಯ್ಕ್, ಹರೀಶ್ ಆರ್, ಪ್ರಸನ್ನ ಬಿ.ಎಂ ಹಾಗೂ ಮಹೇಶ ಶ್ರೀಮಂತ ಸೂಸಲಾಡಿ ಬಂಧಿತ ಆರೋಪಿಗಳು. ಇದನ್ನೂ ಓದಿ: ಸಚಿವ ಉಮೇಶ್‌ ಕತ್ತಿಗೆ ಹೃದಯಾಘಾತ

ಸಿಐಡಿ ತಂಡ ಮತ್ತೋರ್ವ ಆರೋಪಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *