ನಮ್ಮ ಇಲಾಖೆಯಲ್ಲಿ ಕಳ್ಳ ಅಧಿಕಾರಿಗಳಿದ್ದಾರೆ; ಅವರಿಗೆ ನಾನೇ ಸರ್ದಾರ – ಬಿಹಾರ ಸಚಿವ

ಪಾಟ್ನಾ: ನಮ್ಮ ಇಲಾಖೆಯಲ್ಲಿರುವ ಅಧಿಕಾರಿಗಳು, ನೌಕರರು ಕಳ್ಳರು. ಈ ಕಳ್ಳರಿಗೆ ನಾನೇ ಸರ್ದಾರ (ಮುಖ್ಯಸ್ಥ) ಎಂದು ಬಿಹಾರದ ಕೃಷಿ ಸಚಿವ ಸುಧಾಕರ್‌ ಸಿಂಗ್‌ ಹೇಳಿಕೊಂಡಿದ್ದಾರೆ.

ಕೈಮೂರ್‌ ಜಿಲ್ಲೆಯಲ್ಲಿ ರೈತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನನ್ನ ಇಲಾಖೆಯಲ್ಲಿ ಅನೇಕ ಕಳ್ಳರಿದ್ದು, ಹಣವನ್ನು ದೋಚುತ್ತಿದ್ದಾರೆ. ನಾನು ಇಲಾಖೆಗೆ ಪ್ರಭಾರಿಯಾಗಿರುವುದರಿಂದ ಅವರಿಗೆ ಮುಖ್ಯಸ್ಥನಾಗುತ್ತೇನೆ. ನನಗಿಂತ ಮೇಲಿರುವ ಅನೇಕ ಮುಖ್ಯಸ್ಥರಿದ್ದಾರೆ. ಈ ಸರ್ಕಾರವು ಹಳೆಯದು. ಅದರ ಕಾರ್ಯಶೈಲಿಯೂ ಹಳೆಯದು. ಸರ್ಕಾರವನ್ನು ಎಚ್ಚರಿಸುವುದು ಸಾಮಾನ್ಯ ಜನರ ಕರ್ತವ್ಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎರಡನೇ ಬಾರಿಗೆ ಅಟಾರ್ನಿ ಜನರಲ್ ಆಗಿ ಮುಕುಲ್ ರೊಹಟಗಿ ಆಯ್ಕೆ

ನೀವು ಪ್ರತಿಕೃತಿಗಳನ್ನು ಸುಟ್ಟರೆ, ಏನೋ ತಪ್ಪಾಗಿದೆ ಎಂದು ನನಗೆ ಅರಿವಾಗುತ್ತದೆ. ಆದರೆ ನೀವು ಅದನ್ನು ಮಾಡದಿದ್ದರೆ, ಎಲ್ಲವೂ ಸರಿಯಾಗಿದೆ ಎಂದು ನಾನು ನಂಬುತ್ತೇನೆ ಎಂದು ರೈತರನ್ನು ಎಚ್ಚರಿಸಿದ್ದಾರೆ.

ಆರ್‌ಜೆಡಿ ರಾಜ್ಯಾಧ್ಯಕ್ಷ ಜಗದಾನಂದ್ ಸಿಂಗ್ ಅವರ ಪುತ್ರ ಮತ್ತು ಕೈಮೂರ್‌ನ ರಾಮಗಢದ ಶಾಸಕ ಸುಧಾಕರ್ ಸಿಂಗ್ ಅವರು ನಿತೀಶ್ ಕುಮಾರ್ ಸರ್ಕಾರದಲ್ಲಿ ಪ್ರಮುಖ ಖಾತೆಯನ್ನು ಹೊಂದಿದ್ದಾರೆ. ಇದನ್ನೂ ಓದಿ: ಗುಜರಾತ್‍ ಶಾಸಕ ಜಿಗ್ನೇಶ್ ಮೇವಾನಿ ಮೇಲೆ ಗೂಂಡಾಗಳಿಂದ ಹಲ್ಲೆ

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *